ಎಸ್ಸೆಸ್ಸೆಫ್ ಪಾಣೆಮಂಗಳೂರು ಸೆಕ್ಟರ್ ವತಿಯಿಂದ ರಕ್ತದಾನ ಶಿಬಿರ: 118 ಯುನಿಟ್ ರಕ್ತ ಸಂಗ್ರಹ

Update: 2020-11-29 16:09 GMT

ಬಂಟ್ವಾಳ, ನ.29: ಎಸ್ಸೆಸ್ಸೆಫ್ ಪಾಣೆಮಂಗಳೂರು ಸೆಕ್ಟರ್ ವತಿಯಿಂದ, ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಹಾಗೂ ಇಂಡಿಯನ್ ರೆಡ್ ಕ್ರಾಸ್ ಲೇಡಿಗೋಶನ್ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಎಸ್ಸೆಸ್ಸೆಫ್ ಬ್ಲಡ್ ಸೈಬೋ ಇದರ 204ನೇ ರಕ್ತದಾನ ಶಿಬಿರ ಇಂದು ಕಾರಾಜೆಯ ನೂರುಲ್ ಹುದಾ ಮದ್ರಸ ಹಾಲ್ ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸೆಯ್ಯದ್ ಮುಶ್ತಾಕುರ್ರಹ್ಮಾನ್ ತಂಙಳ್ ಚಟ್ಟೆಕ್ಕಲ್ ಪ್ರಾರ್ಥನೆ ನಡೆಸಿದರು. ಸಯೀದ್ ಮುಸ್ಲಿಯಾರ್ ಕಾರಾಜೆ ಅಧ್ಯಕ್ಷತೆ ವಹಿಸಿದ್ದರು. ಶಿಬಿರದಲ್ಲಿ 118 ಯುನಿಟ್ ರಕ್ತ ಸಂಗ್ರಹಿಸಲಾಯಿತು.

ಎಸ್ಸೆಸ್ಸೆಫ್ ಪಾಣೆಮಂಗಳೂರು ಸೆಕ್ಟರ್ ಅಧ್ಯಕ್ಷ ಉಸ್ಮಾನ್ ಸಖಾಫಿ ಸ್ವಾಗತಿಸಿದರು. ಊರಿನ ಗಣ್ಯರು, ಜಮಾಅತ್ ಸದಸ್ಯರು, ಸಂಘಟನಾ ನಾಯಕರು ಶಿಬಿರದಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News