ಡಿ.1: ಪಿಎಂ ಸ್ವನಿಧಿ ಸಾಲ ಉತ್ಸವ

Update: 2020-11-29 15:13 GMT

ಮಂಗಳೂರು, ನ. 29: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ (ಪಿಎಂ ಸ್ವನಿಧಿ) ದ.ಕ. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ದ.ಕ.ಜಿಲ್ಲಾ ಮಟ್ಟದ ಬೃಹತ್ ಪಿಎಂ ಸ್ವನಿಧಿ ಸಾಲ-ಉತ್ಸವ ಹಾಗೂ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಕ್ರಮವು ಡಿ.1ರಂದು ನಗರದ ಪುರಭವನದಲ್ಲಿ ಆಯೋಜಿಸಲಾಗಿದೆ.

ಜಿಲ್ಲೆಯಾದ್ಯಂತ ಕಾರ್ಯಾಚರಿಸುತ್ತಿರುವ ವಿವಿಧ ಬ್ಯಾಂಕುಗಳು ತಮ್ಮ ಕೌಂಟರ್‌ಗಳನ್ನು ಈ ಸಮಾವೇಶದಲ್ಲಿ ಅಳವಡಿಸಲಿದ್ದು, ಸ್ಥಳದಲ್ಲಿಯೇ ಸಾಲ ಮಂಜೂರಾತಿಗೆ ಕ್ರಮಕೈಗೊಳ್ಳಲಿವೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News