ಸಂಚಾರ ಪೊಲೀಸರ ಕಣ್ತಪ್ಪಿಸಲು ಹೋಗಿ ಲಾರಿಗೆ ಬೈಕ್ ಢಿಕ್ಕಿ: ಯುವಕನಿಗೆ ಗಂಭೀರ ಗಾಯ

Update: 2020-11-29 16:26 GMT

ಬೆಂಗಳೂರು, ನ. 29: ಸಂಚಾರ ಪೊಲೀಸರ ಕಣ್ತಪ್ಪಿಸಲು ಹೋಗಿ ಬೈಕ್ ಸವಾರನೋರ್ವ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿನ ಕೆಂಗೇರಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಉಮ್ರಾನ್ ಎಂಬಾತ ಗಾಯಗೊಂಡಿರುವ ಯುವಕನಾಗಿದ್ದು, ಇಲ್ಲಿನ ಕೆಂಗೇರಿಯ ವಿಷ್ಣುವರ್ಧನ್ ಸಮಾಧಿ ರಸ್ತೆ ಈ ಘಟನೆ ಸಂಭವಿಸಿದೆ.

ಉಬ್ರಾನ್ ಬೈಕ್ ಚಾಲನೆ ವೇಳೆ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದು, ಈ ವೇಳೆ ಕೆಂಗೇರಿ ಸಂಚಾರ ಠಾಣಾ ಪೊಲೀಸರು ನಿಯಮ ಉಲ್ಲಂಘನೆ ಮಾಡುವವರಿಗೆ ದಂಡ ವಿಧಿಸುತ್ತಿದ್ದರು. ಇದನ್ನು ಕಂಡು ತಪ್ಪಿಸಲು ಹೋಗಿ ಲಾರಿಗೆ ಢಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಅಪಘಾತದಿಂದ ಉಬ್ರಾನ್ ತಲೆಗೆ ತೀವ್ರ ಪೆಟ್ಟಾಗಿದೆ. ಈ ಸಂಬಂಧ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News