ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಕೋವಿಡ್-19ಗೆ ಬಲಿ

Update: 2020-11-30 05:07 GMT

 ಜೈಪುರ: ಬಿಜೆಪಿ ನಾಯಕಿ ಹಾಗೂ ರಾಜಸ್ಥಾನದ ರಾಜ್‌ಸಮುಂದ್‌ನ ಶಾಸಕಿ ಕಿರಣ್ ಮಹೇಶ್ವರಿ ಅವರು ಕೊರೋನ ವೈರಸ್‌ನಿಂದಾಗಿ ಗುರುಗ್ರಾಮದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.

ಮಹೇಶ್ವರಿ ರಾಜ್‌ಸಮುಂದ್ ಕ್ಷೇತ್ರದಿಂದ ಮೂರು ಬಾರಿ ಶಾಸಕಿಯಾಗಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಕಳೆದ ಕೆಲವು ದಿನಗಳಿಂದ ಮೆದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ರವಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್,ವಿಧಾನಸಭೆಯ ಸ್ಪೀಕರ್ ಸಿ.ಪಿ.ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಹಾಗೂ ಇತರ ನಾಯಕರು ಮಹೇಶ್ವರಿ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News