ರಾಜಕೀಯ ಪ್ರವೇಶಿಸುವ ಕುರಿತು ಶೀಘ್ರವೇ ನಿರ್ಧಾರ: ರಜನೀಕಾಂತ್

Update: 2020-11-30 07:57 GMT

ಚೆೆನ್ನೈ: ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯೋಜನೆಯ ಕುರಿತು ನನ್ನ ನಿರ್ಧಾರವನ್ನು ಶೀಘ್ರವೇ ಪ್ರಕಟಿಸುತ್ತೇನೆ ಎಂದು ತನ್ನ ಬೆಂಬಲಿಗರನ್ನು ಭೇಟಿಯಾದ ಬಳಿಕ ದಕ್ಷಿಣ ಭಾರತದ ಸೂಪರ್‌ಸ್ಟಾರ್ ರಜನೀಕಾಂತ್ ಸೋಮವಾರ ಹೇಳಿದ್ದಾರೆ.

ರಾಜಕೀಯಕ್ಕೆ ಪ್ರವೇಶಿಸದಂತೆ ವೈದ್ಯರು ಸಲಹೆ ನೀಡುತ್ತಿರುವ ಹಿನ್ನೆಲೆಯಲ್ಲಿ ರಜನೀಕಾಂತ್ ಈ ಹೇಳಿಕೆ ಮಹತ್ವ ಪಡೆದಿದೆ.

ರಜನೀಕಾಂತ್ ಅವರ ಮಾಲಕತ್ವದ ಚೆನ್ನೈನಲ್ಲಿರುವ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ರಜನಿ ಮಕ್ಕಳ್ ಮಂದರಮ್‌ನ ಜಿಲ್ಲಾ ಕಾರ್ಯದರ್ಶಿಗಳ ಸಭೆ ನಡೆಸಲಾಗಿದೆ.

"ರಾಜ್ಯ ಪದಾಧಿಕಾರಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ನಾನು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಒಪ್ಪುವುದಾಗಿ ಅವರು ಹೇಳಿದ್ದಾರೆ. ಆದಷ್ಟು ಬೇಗನೆ ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ'' ಎಂದು 70ರ ಹರೆಯದ ರಜನೀಕಾಂತ್ ಹೇಳಿದ್ದಾರೆ.

ತನ್ನ ದೀರ್ಘಕಾಲದಿಂದ ನಿರೀಕ್ಷಿಸುತ್ತಿರುವ ಚುನಾವಣಾ ರಾಜಕೀಯ ಪ್ರವೇಶ ವಿಳಂಬವಾಗಲಿದೆ ಎಂದು ಕಳೆದ ತಿಂಗಳು ರಜನಿ ಸುಳಿವು ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News