ಸಂಧ್ಯಾ ಶೆಣೈಯ ‘ಮುಸ್ಸಂಜೆಯಲ್ಲೊಂದು ಮುಂಜಾವು’ ಕೃತಿ ಬಿಡುಗಡೆ

Update: 2020-11-30 09:02 GMT

ಉಡುಪಿ, ನ.30: ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಹಾಸ್ಯ ಭಾಷಣಕಾರ್ತಿ ಸಂಧ್ಯಾ ಶೆಣೈ ಅಭಿನಂದನಾ ಕಾರ್ಯಕ್ರಮವನ್ನು ರವಿವಾರ ಉಡುಪಿ ಎಂಜಿಎಂ ಕಾಲೇಜಿನ ಧ್ವನ್ಯಾಲೋಕದಲ್ಲಿ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಸಂಧ್ಯಾ ಶೆಣೈ ಅವರನ್ನು ಅಭಿನಂದಿಸಲಾಯಿತು. ಅವರು ಬರೆದ ‘ಮುಸ್ಸಂಜೆಯಲ್ಲೊಂದು ಮುಂಜಾವು’ ಕೃತಿಯನ್ನು ಬಿಡುಗಡೆಗೊಳಿಸ ಲಾಯಿತು. ಅಧ್ಯಕ್ಷತೆಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ.ಎಲ್. ಸಾಮಗ ಅಧ್ಯಕ್ಷತೆ ವಹಿಸಿದ್ದರು.

ಮನೋರೋಗ ತಜ್ಞ ಡಾ.ಪಿ.ವಿ.ಭಂಡಾರಿ, ಪ್ರಾದೇಶಿಕ ರಂಗಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕ ಪ್ರೊ.ವರದೇಶ ಹೀರೆಗಂಗೆ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಯು.ವಿಶ್ವನಾಥ ಶೆಣೈ, ಸಂಚಾಲಕ ರವಿರಾಜ್ ಎಚ್.ಪಿ., ಅಧ್ಯಕ್ಷ ಪ್ರೊ.ಶಂಕರ್, ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ, ವ್ನಿೇಶ್ವರ ಅಡಿಗ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News