ಡಿ.ಕೆ.ಶಿವಕುಮಾರ್ ಗಾಳಿಯಲ್ಲಿ ಗುಂಡು ಹೊಡೆಯುವುದರಲ್ಲಿ ನಿಸ್ಸೀಮರು : ಸಚಿವ ಆರ್.ಅಶೋಕ್

Update: 2020-11-30 11:20 GMT

ಮೈಸೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಾಳಿಯಲ್ಲಿ ಗುಂಡು ಹೊಡೆಯುವುದರಲ್ಲಿ ನಿಸ್ಸೀಮರು ಹಾಗಾಗಿ ಸಿಎಂ ರಾಜಕೀಯ  ಕಾರ್ಯದರ್ಶಿ ಸಂತೋಷ ವಿಚಾರದಲ್ಲಿ ಸಿಡಿ ಇದೆ ಎಂದು ಹೇಳುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಗ್ರಾಮ ಸ್ವರಾಜ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೋಮವಾರ ಮೈಸೂರಿಗೆ ಆಗಮಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಂಗಳೂರಿನ ಆರ್.ಆರ್.ನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಸೋಲನ್ನು ಕಂಡ ಡಿ.ಕೆ.ಶಿವಕುಮಾರ್ ಹತಾಶರಾಗಿದ್ದಾರೆ. ತಮ್ಮ ಅಸ್ಥಿತ್ವವನ್ನು ಉಳಿಸಿಕೊಳ್ಳಲು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಗಾಳಿಯಲ್ಲಿ ಗುಂಡು ಹೊಡೆಯುವುದರಲ್ಲಿ ಡಿ.ಕೆ‌.ಶಿವಕುಮಾರ್  ನಿಸ್ಸೀಮರು ಹಾಗಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಹೇಳಿಕೆಗಳಿಗೆ ಸರ್ಕಾರ ಉತ್ತರ ಕೊಡುವ ಅಗತ್ಯವಿಲ್ಲ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News