ಏಡ್ಸ್ ಬಗ್ಗೆ ಜಾಗೃತಿ ಮೂಡಿಸುವ ಮರಳು ಶಿಲ್ಪ ಅನಾವರಣ

Update: 2020-11-30 13:35 GMT

ಉಡುಪಿ, ನ.30: ವಿಶ್ವ ಏಡ್ಸ್ ದಿನ -2020 ಇದರ ಅಂಗವಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಮಣಿಪಾಲ್ ಸ್ಯಾಂಡ್ ಹಾರ್ಟ್ ನ ಕಲಾವಿದರಾದ ಶ್ರೀನಾಥ್ ಮಣಿಪಾಲ್ ಮತ್ತು ರವಿ ಹಿರೆಬೆಟ್ಟು ಇವರು ಮಣಿಪಾಲದಲ್ಲಿ ಏಡ್ಸ್ ಬಗ್ಗೆ ಜಾಗೃತಿ ಮೂಡಿಸುವ ಮರಳು ಶಿಲ್ಪ ರಚಿಸಿದರು.

ಸಮುದಾಯದ ಒಗ್ಗೂಡುವಿಕೆಯಿಂದ ಈ ಮಾರಕ ಕಾಯಿಲೆಯನ್ನು ನಿಯಂತ್ರಿಸಬಹುದು. ಈ ಕಲಾಕೃತಿಯು ಮೂರು ದಿನಗಳ ಕಾಲ ಡಿಸೆಂಬರ್ 2ರವರೆಗೆ ಮಣಿಪಾಲದಲ್ಲಿ ಪ್ರದರ್ಶನದಲ್ಲಿರುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News