ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2020-11-30 15:17 GMT
ಸಾಂದರ್ಭಿಕ ಚಿತ್ರ

ಹೆಬ್ರಿ, ನ.30: ಮದ್ಯಪಾನ ಮಾಡಿಕೊಂಡು ಸರಿಯಾಗಿ ಕೆಲಸಕ್ಕೆ ಹೋಗದೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ನಾಲ್ಕೂರು ಗ್ರಾಮದ ದಾಸನಕಟ್ಟೆ ಮಿಯ್ಯೆರು ನಿವಾಸಿ ದೇವಣ್ಣ ನಾಯ್ಕ(48) ಎಂಬವರು ನ.29ರಂದು ಮಧ್ಯಾಹ್ನ ವೇಳೆ ಮನೆಯ ರೂಮಿನ ಮೇಲಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರ ಎಂಬಲ್ಲಿ ಕ್ರೇನ್ ಆಪರೇಟರ್ ಆಗಿ ಕೆಲಸ ಮಾಡಿಕೊಂಡಿದ್ದ ಉತ್ತರ ಪ್ರದೇಶದ ರಾಮ್ ಅವತಾರ್, ಈತನು ವಿಪರೀತ ಮಧ್ಯಪಾನ ಮಾಡುವ ಚಟದಿಂದ ನ.29 ರಂದು ರಾತ್ರಿ ರೂವಿನ ಮಾಡಿನ ಚಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News