ಉಪ್ಪಿನಂಗಡಿ : ಸಿಎ ಬ್ಯಾಂಕ್ಗೆ ಪ್ರಶಸ್ತಿ
Update: 2020-11-30 22:55 IST
ಉಪ್ಪಿನಂಗಡಿ: ತನ್ನ ಕಾರ್ಯಕ್ಷೇತ್ರದಲ್ಲಿ ವಿಶೇಷ ಸೇವೆ ಸಲ್ಲಿಸಿರುವ ಉಪ್ಪಿನಂಗಡಿಯ ಸಹಕಾರಿ ವ್ಯವಸಾಯಿಕ ಸಂಘವು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಮಹಾಸಭೆಯಲ್ಲಿ ಪ್ರಶಸ್ತಿಗೆ ಭಾಜನವಾಯಿತು.
ಸಂಸ್ಥೆಯ ಅಧ್ಯಕ್ಷರಾದ ಕೆ.ವಿ. ಪ್ರಸಾದ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಕ್ಲೇರಿ ವೇಗಸ್ ಹಾಗೂ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಜತ್ತಪ್ಪ ಗೌಡ ಈ ಸಂದರ್ಭ ಉಪಸ್ಥಿತರಿದ್ದು, ಸನ್ಮಾನ ಸ್ವೀಕರಿಸಿ, ಪ್ರಶಸ್ತಿ ಪಡೆದುಕೊಂಡರು.