ಶಿವಸೇನೆಗೆ ಊರ್ಮಿಳಾ ಮಾತೋಂಡ್ಕರ್ ಸೇರ್ಪಡೆ

Update: 2020-12-01 10:00 GMT

ಹೊಸದಿಲ್ಲಿ: ಕಳೆದ ವರ್ಷ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೋತಿದ್ದ,ನಟಿ, ರಾಜಕಾರಣಿ ಊರ್ಮಿಳಾ ಮಾತೋಂಡ್ಕರ್ ಮಂಗಳವಾರ ಶಿವಸೇನೆ ಪಕ್ಷಕ್ಕೆ ಸೇರ್ಪಡೆಯಾದರು.

ಮಹಾರಾಷ್ಟ್ರ ಸಿಎಂ ಹಾಗೂ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಸಮ್ಮುಖದಲ್ಲಿ ಠಾಕ್ರೆ ಅವರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಊರ್ಮಿಳಾ ಶಿವಸೇನೆ ಪಕ್ಷಕ್ಕೆ ಸೇರಿದರು. ಉದ್ಧವ್ ಠಾಕ್ರೆ ಪತ್ನಿ ರಶ್ಮೀ ಠಾಕ್ರೆ ಅವರು ಊರ್ಮಿಳಾಗೆ ಪಕ್ಷದ ಶಾಲು ಹೊದಿಸಿ ಸ್ವಾಗತಿಸಿದರು. ಊರ್ಮಿಳಾ ಅವರು ರಾಜ್ಯಪಾಲರ ಕೋಟಾದಿಂದ ವಿಧಾನಪರಿಷತ್ ಗೆ ಆಯ್ಕೆಯಾಗುವ ಸಾಧ್ಯತೆಯಿದೆ.

46ರ ವಯಸ್ಸಿನ ಊರ್ಮಿಳಾ ಈ ಹಿಂದೆ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದರು. ಏಳು ತಿಂಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು ಸೆಪ್ಟಂಬರ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News