ನೇರಳಕಟ್ಟೆ: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
ಬಂಟ್ವಾಳ, ಡಿ.1: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಮಾಣಿ ಸಮೀಪದ ನೇರಳಕಟ್ಟೆ ಪರ್ಲೊಟ್ಟು ಎಂಬಲ್ಲಿ ನಡೆದಿದೆ.
ಪರ್ಲೊಟ್ಟು ನಿವಾಸಿ ಉಮರ್ ಫಾರೂಕ್ ಎಂಬವರ ಮನೆಯಲ್ಲಿ ಈ ಕಳವು ನಡೆದಿದ್ದು, ಇಂದು ಬೆಳಗ್ಗೆ ಕೃತ್ಯ ಬೆಳಕಿಗೆ ಬಂದಿದೆ.
ಉಮರ್ ಫಾರೂಕ್ ತನ್ನ ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ಮನೆಯ ಒಂದು ಬೆಡ್ ರೂಮಿನಲ್ಲಿ ಮಲಗಿದ್ದರು. ಇನ್ನೋರ್ವ ಪುತ್ರ ಬೇರೊಂದು ಬೆಡ್ ರೂಮಿನಲ್ಲಿ ಮಲಗಿದರೆ, ಮನೆಯ ಕೆಲಸದ ಮಹಿಳೆ ಮೇಲ್ಭಾಗದ ಇನ್ನೊಂದು ಕೋಣೆಯಲ್ಲಿ ಮಲಗಿದ್ದರು. ಉಮರ್ ಫಾರೂಕ್ ಮಲಗಿದ್ದ ಕೋಣೆಗೆ ಪ್ರವೇಶಿಸಿದ ಕಳ್ಳರು ಅಲ್ಲಿದ್ದ ಕಪಾಟಿನಲ್ಲಿರಿಸಲಾಗಿದ್ದ ಚಿನ್ನಾಭರಣವನ್ನು ಕದ್ದು ಹಿಂಬಾಗಿಲು ಮೂಲಕ ಪರಾರಿಯಾಗಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಘಟನಾ ಸ್ಥಳಕ್ಕೆ ವಿಟ್ಲ ಎಸೈ ಎಸ್ಸೆ ವಿನೋದ್ ರೆಡ್ಡಿ ಮತ್ತು ಸಿಬ್ಬಂದಿ ಆಗಮಿಸಿ ಪರಿಶೀಲಿಸಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞ ರನ್ನೂ ಕರೆಸಿ ಪರಿಶೀಲನೆ ನಡೆಸಲಾಗಿದೆ.