ರೈತರ ಪ್ರತಿಭಟನೆಯೊಂದಿಗೆ ಕೈಜೋಡಿಸಿದ ಭೀಮ್ ಆರ್ಮಿ

Update: 2020-12-01 10:57 GMT

ಹೊಸದಿಲ್ಲಿ: ಇತ್ತೀಚೆಗೆ ಕೇಂದ್ರ ಸರಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ದಿಲ್ಲಿ ಹಾಗೂ ಉತ್ತರಪ್ರದೇಶವನ್ನು ಸಂಪರ್ಕಿಸುವ ಯುಪಿಗೇಟ್ ಬಳಿ ಪ್ರತಿಭಟನೆ ನಡೆಸುತ್ತಿರುವ ರೈತರುಗಳೊಂದಿಗೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಝಾದ್ ಕೈಜೋಡಿಸಿದರು.

ಆಝಾದ್ ತನ್ನ ಬೆಂಬಲಿಗರ ಜೊತೆಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗಿಯಾದರು. ಸಾವಿರಾರು ರೈತರು ಸತತ ಆರನೇ ದಿನವಾದ ಮಂಗಳವಾರ ದಿಲ್ಲಿಯ ವಿವಿಧ ಬಾರ್ಡರ್ ಗಳಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.ಪಂಜಾಬ್, ಹರ್ಯಾಣ ಹಾಗೂ ಉತ್ತರಪ್ರದೇಶದ ರೈತರು ದಿಲ್ಲಿ ಚಲೋ ಆಂದೋಲನದಲ್ಲಿ ಭಾಗಿಯಾದ ಬಳಿಕ ಪ್ರತಿಭಟನೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News