ಮನೆ ಗೋಡೆ ಕುಸಿದು ದಂಪತಿ ಮೃತ್ಯು, ಬಾಲಕ ಪ್ರಾಣಾಪಾಯದಿಂದ ಪಾರು

Update: 2020-12-01 11:17 GMT

ಬಳ್ಳಾರಿ, ಡಿ.1: ಮನೆಯ ಗೋಡೆ ಮತ್ತು ಮೇಲ್ಛಾವಣಿ ಏಕಾಏಕಿ ಕುಸಿದು ದಂಪತಿ ಸಾವನ್ನಪ್ಪಿರುವ ಘಟನೆ ಬಳ್ಳಾರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಕೌಲ್ ಬಜಾರ್ ವ್ಯಾಪ್ತಿಯ ಕಡಪ ಬೀದಿಯಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಕೊಲ್ಲಣ್ಣ(45), ಸಾವಿತ್ರಮ್ಮ(40) ಮೃತ ದಂಪತಿ ಎಂದು ಪೊಲೀಸರು ತಿಳಿಸಿದ್ದಾರೆ.

ಅದೃಷ್ಟವಶಾತ್ ಅವಘಡದಲ್ಲಿ ದಂಪತಿಯ 12 ವರ್ಷದ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ವೃತ್ತಿಯಲ್ಲಿ ಆಟೊ ಚಾಲಕನಾಗಿದ್ದ ಕೊಲ್ಲಣ್ಣ ತನ್ನ ಕುಟುಂಬದೊಂದಿಗೆ ಮಣ್ಣಿನ ಮನೆಯಲ್ಲಿ ವಾಸಿಸುತ್ತಿದ್ದರು. ಇತ್ತೀಚೆಗೆ ಸುರಿದ ಮಳೆಗೆ ಮನೆಯ ಗೋಡೆ ಶಿಥಿಲಗೊಂಡಿತ್ತು. ಹೀಗಾಗಿ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News