ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಪ್ರವಾಸ

Update: 2020-12-01 13:43 GMT

ಉಡುಪಿ, ಡಿ.1: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೆ.ಜಯಪ್ರಕಾಶ್ ಹೆಗ್ಡೆ ಡಿ.2 ರಂದು ಜಿಲ್ಲೆಗೆ ಆಗಮಿಸಲಿದ್ದು, ಡಿ.6ರವರೆಗೆ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಡಿ.2ರ ಸಂಜೆ 4:30ಕ್ಕೆ ಕುಂದಾಪುರಕ್ಕೆ ಆಗಮಿಸುವ ಹೆಗ್ಡೆ, ಕೊರ್ಗಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಡಿ.4ರಂದು ಬೆಳಗ್ಗೆ 10:30ಕ್ಕೆ ಮಣಿಪಾಲ ಜಿಲ್ಲಾದಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ, ಸಿಇಓ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಕಾರ್ಯಕ್ರಮಗಳ ಕುರಿತು ಸಮಾಲೋಚನೆ ನಡೆಸುವರು. ಅಪರಾಹ್ನ 3:00ಕ್ಕೆ ಕುಂದಾಪುರ ಸರ್ಕ್ಯೂಟ್ ಹೌಸ್‌ನಲ್ಲಿ ಸಾರ್ವಜನಿಕರು, ಸಂಘಸಂಸ್ಥೆಗಳೊಂದಿಗೆ ಇಲಾಖಾ ಕಾರ್ಯಕ್ರಮಗಳ ಕುರಿತು ಸಮಾಲೋಚನೆ.

ಡಿ.5ರಂದು ಬೆಳಗ್ಗೆ 10:30ಕ್ಕೆ ಕುಂದಾಪುರದಲ್ಲಿ ಸಹಾಯಕ ಆಯುಕ್ತರು, ತಾಪಂನ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಕಾರ್ಯಕ್ರಮಗಳ ಕುರಿತು ಚರ್ಚೆ.

ಡಿ.6ರಂದು ಬೆಳಗ್ಗೆ 11 ಕ್ಕೆ ಅಮಾಸೆಬೈಲಿನಲ್ಲಿ ಎ.ಜಿ.ಕೊಡ್ಗಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮ, ಅಪರಾಹ್ನ 3 ಕ್ಕೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯೊಂದಿಗೆ ಇಲಾಖಾ ಕಾರ್ಯಕ್ರಮಗಳ ಕುರಿತು ಚರ್ಚೆ ಬಳಿಕ ಸರ್ಕ್ಯೂಟ್ ಹೌಸ್‌ನಲ್ಲಿ ಸಾರ್ವಜನಿಕರೊಂದಿಗೆ, ಸಂಘಸಂಸ್ಥೆಗಳ ಪದಾಧಿಕಾರಿ ಗಳೊಂದಿಗೆ ಇಲಾಖಾ ಕಾರ್ಯಕ್ರಮಗಳ ಕುಂದುಕೊರತೆಗಳ ಪರಿಶೀಲನೆ. ಡಿ.7ರ ಸೋಮವಾರ ಬೆಳಗ್ಗೆ 10 ಕ್ಕೆ ಬೆಂಗಳೂರಿಗೆ ಪ್ರಯಾಣ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News