ಅಕ್ರಮ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ, ಆಟೋ ಜಪ್ತಿ

Update: 2020-12-01 15:56 GMT

ಶಿವಮೊಗ್ಗ, ಡಿ.1: ಗ್ರಾಮ ಪಂಚಾಯತ್ ಚುನಾವಣೆ ನೀತಿ ಸಂಹಿತೆ ಜಾರಿಯಾದ ಬೆನ್ನಿಗೆ, ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಮದ್ಯ ಮತ್ತು ಸಾಗಣೆಗೆ ಬಳಸುತ್ತಿದ್ದ ಆಟೋವನ್ನು ವಶಕ್ಕೆ ಪಡೆಯಲಾಗಿದೆ.

ಮತ್ತೂರು ರಸ್ತೆಯಲ್ಲಿ ಪೊಲೀಸರು ರಸ್ತೆಗಾವಲು ಮಾಡುತ್ತಿದ್ದ ವೇಳೆ ಆಟೋದಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ. ಆಟೋದಲ್ಲಿ 77.760 ಲೀಟರ್ ಮದ್ಯ ಸಾಗಣೆ ಮಾಡಲಾಗುತ್ತಿತ್ತು. ಸಂತೆಕಡೂರು ಗ್ರಾಮದ ಶೇಖರ್ ಎಂಬಾತನನ್ನು ಬಂಧಿಸಲಾಗಿದೆ.

ಆಟೋದ ಮೌಲ್ಯ 50 ಸಾವಿರ ರೂ. ಮದ್ಯದ ಮೌಲ್ಯ 40 ಸಾವಿರ ರೂ. ಎಂದು ಅಂದಾಜು ಮಾಡಲಾಗಿದೆ.

ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ಅವರ ನಿರ್ದೇಶನದ ಮೇರೆಗೆ ಅಬಕಾರಿ ನಿರೀಕ್ಷಕರಾದ ಶೀಲಾ ಧಾರಜ್ಕರ್, ಅಬಕಾರಿ ಉಪ ನಿರೀಕ್ಷಕಿ ದಿವ್ಯಾ, ಅಬಕಾರಿ ರಕ್ಷಕರಾದ ರಂಜನ್, ನಾಗಪ್ಪ ಶಿರೋಳ್ ಹಾಗೂ ವಾಹನ ಚಾಲಕ ನ್ಯಾನರಾಜ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News