ಹರ್ಯಾಣ: ಬಿಜೆಪಿ ನೇತೃತ್ವದ ಸರಕಾರಕ್ಕೆ ಬೆಂಬಲ ಹಿಂಪಡೆದ ಪಕ್ಷೇತರ ಶಾಸಕ

Update: 2020-12-01 17:33 GMT

ಚಂಡೀಗಢ, ಡಿ.1: ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿರುವ ಹರ್ಯಾಣದ ಪಕ್ಷೇತರ ಶಾಸಕ ಸೋಂಬೀರ್ ಸಂಗ್ವಾನ್ ರಾಜ್ಯದ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ.

ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ನಡೆದುಕೊಳ್ಳುವ ರೀತಿ ಸರಿಯಲ್ಲ. ಆದ್ದರಿಂದ ರೈತ ವಿರೋಧಿ ಬಿಜೆಪಿ ಸರಕಾರದೊಂದಿಗೆ ಗುರುತಿಸಿಕೊಳ್ಳಲು ನನಗೆ ಇಷ್ಟವಿಲ್ಲ ಎಂದು ಸಂಗ್ವಾನ್ ಹೇಳಿದ್ದಾರೆ.

ಸಂಗ್ವಾನ್ ಬೆಂಬಲ ಹಿಂಪಡೆದರೂ ಇದರಿಂದ ಮನೋಹರಲಾಲ್ ಖಟ್ಟರ್ ನೇತೃತ್ವದ ಸಮ್ಮಿಶ್ರ ಸರಕಾರದ ಮೇಲೆ ಯಾವುದೇ ಪರಿಣಾಮವಾಗದು. 90 ಸದಸ್ಯ ಬಲದ ಹರ್ಯಾಣ ವಿಧಾನಸಭೆಯಲ್ಲಿ ಬಿಜೆಪಿ 40, ಮಿತ್ರ ಪಕ್ಷ ಜೆಜೆಪಿ 10 ಸದಸ್ಯರನ್ನು ಹೊಂದಿದೆ. 7 ಪಕ್ಷೇತರ ಸದಸ್ಯರಿದ್ದು ಇವರಲ್ಲಿ 5 ಸದಸ್ಯರು ಸಮ್ಮಿಶ್ರ ಸರಕಾರಕ್ಕೆ ಬೆಂಬಲ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News