ದುರಹಂಕಾರ ಬದಿಗಿಡಿ: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ
Update: 2020-12-01 17:31 GMT
ಹೊಸದಿಲ್ಲಿ, ಡಿ.1: ರೈತರು ಬೀದಿಗಿಳಿದು ಪ್ರತಿಭಟಿಸುತ್ತಿದ್ದರೆ ಸುಳ್ಳುಗಾರನು ಟಿವಿ ಚಾನೆಲ್ಗಳಲ್ಲಿ ಭಾಷಣ ಬಿಗಿಯುವುದರಲ್ಲಿ ನಿರತನಾಗಿದ್ದಾನೆ. ದುರಹಂಕಾರ ಬದಿಗಿಟ್ಟು ರೈತರ ಹಕ್ಕುಗಳನ್ನು ಅವರಿಗೆ ನೀಡುವತ್ತ ಗಮನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದಾರೆ.
ಶ್ರಮಜೀವಿಗಳಾದ ರೈತರಿಗೆ ನಾವು ಋಣಿಯಾಗಿರಬೇಕು. ಅವರ ಹಕ್ಕುಗಳನ್ನು ನೀಡುವ ಮೂಲಕ, ಅವರಿಗೆ ನ್ಯಾಯ ಒದಗಿಸುವ ಮೂಲಕ ಋಣ ಸಂದಾಯ ಮಾಡಬೇಕು. ಲಾಠಿ ಬೀಸುವುದು, ಅಶ್ರುವಾಯು ಪ್ರಯೋಗಿಸುವ ಮೂಲಕವಲ್ಲ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.