ಡಿ.3ರಂದು ಉಡುಪಿ ಜಿಲ್ಲೆಗೆ ಸಚಿವ ಬಸವರಾಜ ಬೊಮ್ಮಾಯಿ ಭೇಟಿ

Update: 2020-12-02 14:38 GMT

ಉಡುಪಿ, ಡಿ.2: ರಾಜ್ಯದ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ನಾಳೆ ಡಿ.3ರಂದು ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.

 ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನಕದಾಸ ಜಯಂತಿ ದಿನಾಚರಣೆ ಕಾರ್ಯಕ್ರಮ, 10:30ಕ್ಕೆ ನಗರದ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯ ಉದ್ಘಾಟನಾ ಸಮಾರಂಭ, 11:00ಕ್ಕೆ ಜಿಲ್ಲಾಸ್ಪತ್ರೆಯ ದ್ರವ ರೂಪದ ಆಮ್ಲಜನಕ ನೂತನ ಘಟಕ ಉದ್ಘಾಟನೆ ಹಾಗೂ ಜಿಲ್ಲಾಸ್ಪತ್ರೆಯ ನೂತನ ಕಟ್ಟಡದ ರೂಪುರೇಷೆಗಳ ಬಗ್ಗೆ ಚರ್ಚೆ, ಅಪರಾಹ್ನ 12:00ಕ್ಕೆ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ ಉದ್ಘಾಟನೆ.

ಸಂಜೆ 4 ಕ್ಕೆ ಮಣಿಪಾಲದಲ್ಲಿ ಶ್ರೀಮತಿ ಇಂದಿರಾಗಾಂಧಿ ಮೆಟ್ರಿಕ್ ನಂತರದ ನರ್ಸಿಂಗ್ ವಿದ್ಯಾರ್ಥಿ ನಿಲಯದ ಕಟ್ಟಡ ಉದ್ಘಾಟನೆ, 4:15ಕ್ಕೆ ಮಣಿಪಾಲದಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯದ ಕಟ್ಟಡಕ್ಕೆ ಶಿಲಾನ್ಯಾಸ, 4:45ಕ್ಕೆ ನಿಟ್ಟೂರಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡ ಉದ್ಘಾಟನೆ, 5:30ಕ್ಕೆ ಮಲ್ಪೆ ಸೀ-ವಾಕ್ ಬಳಿಯ ಬಯಲು ರಂಗಮಂದಿರ ಹಾಗೂ ಉದ್ಯಾನವನದ ಉದ್ಘಾಟನಾ ಸಮಾರಂಭ ದಲ್ಲಿ ಭಾಗವಹಿಸುವರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News