ದಿಲ್ಲಿ ಗಲಭೆ ಪ್ರಕರಣ: ಉಮರ್ ಖಾಲಿದ್ ನ್ಯಾಯಾಂಗ ಬಂಧನ 14 ದಿನ ವಿಸ್ತರಣೆ

Update: 2020-12-02 16:45 GMT

ಹೊಸದಿಲ್ಲಿ, ಡಿ. 2: ಈಶಾನ್ಯ ದಿಲ್ಲಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಜೆಎನ್‌ಯುನ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ನ್ಯಾಯಾಂಗ ಬಂಧನವನ್ನು ದಿಲ್ಲಿ ನ್ಯಾಯಾಲಯ ಬುಧವಾರ 14 ದಿನಗಳ ಕಾಲ ವಿಸ್ತರಿಸಿದೆ.

ಇನ್ನು ಹೆಚ್ಚು ಕಾಲ ಕಸ್ಟಡಿಗೆ ನೀಡುವಂತೆ ಪೊಲೀಸರು ಸಲ್ಲಿಸಿದ ಮನವಿಯನ್ನು ವಿರೋಧಿಸಲು ಅವಕಾಶ ನೀಡಬೇಕೆಂಬ ಉಮರ್ ಖಾಲಿದ್ ಅವರ ಕೋರಿಕೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಅಥವಾ ಪೊಲೀಸ್ ಕಸ್ಟಡಿಗೆ ಕಳುಹಿಸುವ ತನಿಖಾಧಿಕಾರಿಯ ಮನವಿಯನ್ನು ಹೊಸತಾಗಿ ಬಂಧನವಾದ ಸಂದರ್ಭ ಆರೋಪಿ ಹಾಗೂ ಅವರ ಪರ ವಕೀಲರು ವಿರೋಧಿಸಲು ಸಾಧ್ಯವಿದೆ ಎಂದು ಮುಖ್ಯ ಮೆಟ್ರೋಪಾಲಿಟಿನ್ ನ್ಯಾಯಾಧೀಶ ದಿನೇಶ್ ಕುಮಾರ್ ಹೇಳಿದರು. ನ್ಯಾಯಾಂಗ ಕಸ್ಟಡಿ ವಿಸ್ತರಿಸಲು ಸಾಕಷ್ಟು ನೆಲೆಗಳಿವೆ ಎಂದು ಪ್ರತಿಪಾದಿಸಿರುವ ಸುಪ್ರೀಂ ಕೋರ್ಟ್ ಖಾಲಿದ್ ಅವರಿಗೆ ಡಿಸೆಂಬರ್ 16ರ ವರೆಗೆ ನ್ಯಾಯಾಂಗ ಕಸ್ಟಡಿ ವಿಧಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News