ಕೆಎಸ್ಆರ್‌ಟಿಸಿಗೆ ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹಣಾ ಪ್ರಶಸ್ತಿ

Update: 2020-12-02 17:52 GMT

ಬೆಂಗಳೂರು, ಡಿ.2: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ(ಕೆಎಸ್ಸಾರ್ಟಿಸಿ) ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹಣಾ ಪ್ರಶಸ್ತಿಗೆ ಲಭಿಸಿದೆ. ಆ ಮೂಲಕ ಸಾರಿಗೆ ನಿಗಮವು 6ನೇ ಬಾರಿಗೆ ಸದರಿ ಪ್ರಶಸ್ತಿಯನ್ನು ಪಡೆಯುತ್ತಿದೆ.

ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಸಮಾರಂಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕೆಎಸ್ಸಾರ್ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದಗೆ ಪ್ರಶಸ್ತಿ ಪ್ರದಾನ ಮಾಡಿದರು.

ಈ ವೇಳೆ ಗೃಹ ಇಲಾಖೆಯ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಗೃಹ ಇಲಾಖೆ ಕಾರ್ಯದರ್ಶಿ ರೂಪಾ ಮೌದ್ಗಿಲ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News