ಡಿಜೆ-ಕೆಜಿ ಹಳ್ಳಿ ಗಲಭೆ ಪ್ರಕರಣ: ಮಾಜಿ ಕಾರ್ಪೊರೇಟರ್ ಬಂಧನ

Update: 2020-12-03 03:43 GMT

ಬೆಂಗಳೂರು, ಡಿ.3: ಡಿಜೆ-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಬಿಬಿಎಂಪಿ ಮಾಜಿ ಸದಸ್ಯ ಎ.ಆರ್.ಝಾಕೀರ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ತಡರಾತ್ರಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ ತನಿಖಾಧಿಕಾರಿಗಳು, ಆರೋಪಿ ಝಾಕೀರ್ ಅನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.

ಗಲಭೆ ಪ್ರಕರಣ ಸಂಬಂಧಿಸಿದಂತೆ ವಿಚಾರಣೆ ಹಾಜರಾಗುವಂತೆ ಸಿಸಿಬಿ ನೋಟಿಸ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಝಾಕೀರ್ ತಲೆಮರೆಸಿಕೊಂಡಿದ್ದರು. ಇದಾದ ಬಳಿಕ, ಸಿಸಿಬಿ ವಿಶೇಷ ತಂಡವೊಂದನ್ನು ರಚನೆ ಮಾಡಿ ಅವರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಇದೇ ಪ್ರಕರಣದಲ್ಲಿ ಇತ್ತೀಚಿಗೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅನ್ನು ಸಿಸಿಬಿ ಬಂಧಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News