ಶಿವಮೊಗ್ಗ: ಮೂರು ಠಾಣಾ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿ

Update: 2020-12-03 14:37 GMT

ಶಿವಮೊಗ್ಗ, ಡಿ.3: ಬಜರಂಗದಳದ ಕಾರ್ಯಕರ್ತ ನಾಗೇಶ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ನಗರದಲ್ಲಿ ಉಂಟಾದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ಠಾಣಾ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿಗೊಳಿಸಲಾಗಿದೆ.

ಶಿವಮೊಗ್ಗದ ದೊಡ್ಡಪೇಟೆ, ತುಂಗಾನಗರ, ಕೋಟೆ ಠಾಣೆ ವ್ಯಾಪ್ತಿಯಲ್ಲಿ ಸಂಜೆ 6 ರಿಂದ ನಾಳೆ ಬೆಳಗ್ಗೆ 6 ರವರೆಗೆ ರಾತ್ರಿ ಕರ್ಪ್ಯೂ ಜಾರಿಗೊಳಿಸಲಾಗಿದೆ. ಉಳಿದಂತೆ ನಗರದಾದ್ಯಂತ ಡಿ.5ರ ಬೆಳಿಗ್ಗೆ 10 ಗಂಟೆಯವರೆಗೂ ನಿಷೇಧಾಜ್ಞೆ ಇರಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ ಶಾಂತರಾಜು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News