ಬಸ್ ಢಿಕ್ಕಿ ಪಾದಾಚಾರಿ ಮೃತ್ಯು

Update: 2020-12-03 15:22 GMT

ಕಾಪು, ಡಿ.3: ವೇಗವಾಗಿ ಬಂದ ಬಸ್ಸೊಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತಿದ್ದ ಯುವಕನಿಗೆ ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳ ದಲ್ಲೇ ಮೃತಪಟ್ಟ ಘಟನೆ ಡಿ.2ರ ರಾತ್ರಿ 8:30ರ ಸುಮಾರಿಗೆ ಉದ್ಯಾವರ ಗ್ರಾಮದ ಇಂಡಿಯನ್ ಪೆಟ್ರೋಲ್ ಪಂಪ್‌ನ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಉದ್ಯಾವರ ಅಂಕುದ್ರುನ ಸುನಿಲ್ ಎಂದು ಗುರುತಿಸಲಾಗಿದೆ. ಇವರು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಮಂಗಳೂರಿನಿಂದ ಉಡುಪಿಯತ್ತ ಧಾವಿಸುತಿದ್ದ ಬಸ್ ರಸ್ತೆಯ ತೀರಾ ಎಡಬದಿಗೆ ಬಂದು ಸುನಿಲ್‌ಗೆ ಢಿಕ್ಕಿ ಹೊಡೆದಿತ್ತು. ಇದರಿಂದ ತಲೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು.

ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News