ಬುರೇವಿ ಚಂಡಮಾರುತ: ಕೇರಳದ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ

Update: 2020-12-03 15:41 GMT

ತಿರುವನಂತಪುರ, ಡಿ. 3: ಬುರೇವಿ ಚಂಡಮಾರುತದ ಪರಿಣಾಮ ಸುರಿಯುಲಿರುವ ಮಳೆ, ಬಿರುಗಾಳಿಯಿಂದ ಹೆಚ್ಚಾಗುವ ಆರೋಗ್ಯ ಸಮಸ್ಯೆಗಳು ಹಾಗೂ ಚಂಡಮಾರುತದ ಬಳಿಕ ಕಾಣಿಸಿಕೊಳ್ಳುವ ಸಾಧ್ಯತೆ ಇರುವ ಸೋಂಕು ರೋಗಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಕೇರಳ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಘೋಷಿಸಿದೆ.

ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ಸಾಕಷ್ಟು ವೈದ್ಯಕೀಯ ಸೌಕರ್ಯಗಳು ಹಾಗೂ ಔಷಧಗಳನ್ನು ಸಿದ್ಧವಾಗಿ ಇರಿಸಿಕೊಳ್ಳುವಂತೆ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಆರೋಗ್ಯ ಸೇವೆಗಳ ನಿರ್ದೇಶಕರು ಹಾಗೂ ವೈದ್ಯಕೀಯ ಶಿಕ್ಷಣದ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News