ಕೇರಳ, ತಮಿಳುನಾಡು ಸಿಎಂ ಜೊತೆ ಮಾತನಾಡಿದ ಅಮಿತ್ ಶಾ

Update: 2020-12-03 15:45 GMT

ತಿರುವನಂತಪುರ, ಡಿ. 3: ಬುರೇವಿ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ತಮಿಳುನಾಡು ಹಾಗೂ ಕೇರಳದ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

ಅಲ್ಲದೆ, ಕೇಂದ್ರದಿಂದ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ‘‘ಬುರೇವಿ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡಿನ ಮುಖ್ಯಮತ್ರಿ ಇ.ಕೆ. ಪಳನಿಸ್ವಾಮಿ ಹಾಗೂ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಲ್ಲಿ ಮಾತನಾಡಿದ್ದೇನೆ. ತಮಿಳುನಾಡು ಹಾಗೂ ಕೇರಳದ ಜನರಿಗೆ ಎಲ್ಲ ರೀತಿಯ ನೆರವು ನೀಡಲು ಮೋದಿ ಸರಕಾರ ಬದ್ಧವಾಗಿದೆ. ಎನ್‌ಡಿಆರ್‌ಎಫ್ ಹಲವು ತಂಡಗಳನ್ನು ಎರಡೂ ರಾಜ್ಯಗಳಲ್ಲಿ ಈಗಾಗಲೇ ನಿಯೋಜಿಸಲಾಗಿದೆ’’ ಎಂದು ಶಾ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News