ಕೆಲವೇ ದಿನಗಳಲ್ಲಿ ಕರ್ನಾಟಕ ರಾಜ್ಯಕ್ಕೂ ಸಿಆರ್‌ಝೆಡ್ ವಿನಾಯಿತಿ: ಬೊಮ್ಮಾಯಿ

Update: 2020-12-03 15:46 GMT

ಮಲ್ಪೆ, ಡಿ.3: ಗೋವಾ ರಾಜ್ಯಕ್ಕೆ ಸಿಆರ್‌ಝೆಡ್‌ನಲ್ಲಿ ವಿನಾಯಿತಿ ನೀಡಿ ರುವುದರಿಂದ ಪ್ರವಾಸೋದ್ಯಮ ಸಾಕಷ್ಟು ಅಭಿವೃದ್ಧಿಯಾಗಿದೆ. ಅದೇ ರೀತಿಯಲ್ಲಿ ಕರ್ನಾಟಕ ರಾಜ್ಯಕ್ಕೂ ವಿನಾಯಿತಿ ನೀಡಬೇಕೆಂಬ ಹೋರಾಟವು ಹಲವು ದಶಕಗಳಿಂದ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಇದೀಗ ಕೇಂದ್ರ ಸರಕಾರ ಕರಡು ತಯಾರಿಸಿದ್ದು, ಇನ್ನು ಕೆಲವೇ ದಿನಗಳಲ್ಲಿ ಗೋವಾ ಮಾದರಿಯಲ್ಲಿ ನಮ್ಮ ರಾಜ್ಯಕ್ಕೂ ಸಿಆರ್‌ಝೆಡ್ ವಿನಾಯಿತಿ ದೊರೆಯಲಿದೆ ಎಂದು ರಾಜ್ಯ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಲ್ಪೆ ಸೀವಾಕ್ ಬಳಿ ಸುಮಾರು ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸ ಲಾದ ಬಯಲು ರಂಗ ಮಂದಿರ ಹಾಗೂ ಉದ್ಯಾವನವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯ ಸಣ್ಣ ಸಣ್ಣ ಮೀನುಗಾರಿಕೆ ಬಂದರುಗಳ ಅಭಿವೃದ್ಧಿಗೆ ಪ್ರಸ್ತಾವ ತಯಾರಿಸಿ ಸಲ್ಲಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಉಡುಪಿ ಕರಾವಳಿ ಬೈಪಾಸ್‌ನಿಂದ ಮಲ್ಪೆವರೆಗಿನ ಐದು ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ಧಿ ಪಡಿಸಲು 91ಕೋಟಿ ರೂ. ಅನುದಾನ ಬಿಡುಗಡೆಗೆ ಅನುಮೋದನೆ ನೀಡಲಾಗಿದ್ದು, ಒಂದು ವರ್ಷದೊಳಗೆ ಇದರ ಕಾಮಗಾರಿಯನ್ನು ನಡೆಸಲಾಗುವುದು ಎಂದರು.

ಜಿಲ್ಲೆಯ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಕಾರ್ಯಪಡೆಯನ್ನು ಕ್ರಿಯಶೀಲ ಮಾಡಬೇಕು. ಅಲ್ಲದೆ ಪ್ರತ್ಯೇಕ ಲೋಗೊವನ್ನು ತಯಾರಿಸಿ ಎಲ್ಲ ದಾಖಲೆ ಗಳಲ್ಲೂ ನಮೂದಿಸಬೇಕು. ಜಿಲ್ಲೆಯ ಟೆಂಪಲ್ ಹಾಗೂ ಬೀಚ್ ಟೂರಿಸಂನ ಮಾಸ್ಟರ್ ಪ್ಲಾನ್‌ನೊಂದಿಗೆ ವಿಜನ್ ಡಾಕ್ಯುಮೆಂಟ್ ತಯಾರಿಸಬೇಕು. ಇದರಿಂದ ಪ್ರವಾಸೋದ್ಯಮಕ್ಕೆ ಹಂತಹಂತವಾಗಿ ಅನುದಾನ ನೀಡಲು ಸಾಧ್ಯವಾುತ್ತದೆ ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಜಿಪಂ ಸಿಇಓ ಡಾ. ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ನಗರ ಸಭೆ ಸದಸ್ಯೆ ಎಡ್ಲಿನ್ ಕರ್ಕಡ, ಯಶ್ಪಾಲ್ ಸುವರ್ಣ ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ವಂದಿಸಿದರು. ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಕಾರ್ಯ ಕ್ರಮ ನಿರೂಪಿಸಿದರು.

ಮಲ್ಪೆ ಪಡುಕೆರೆ ಬೀಚ್‌ನಲ್ಲಿ ಸಮುದ್ರದಲ್ಲಿ ಸಂಚರಿಸುವ ದೇಶ ವಿದೇಶಗಳ ಹಡಗುಗಳ ತಂಗುದಾಣವಾಗಿರುವ ಮರೀನಾವನ್ನು ಸ್ಥಾಪಿಸಲು ಡಿಪಿಆರ್ ತಯಾರಿಕೆಗೆ ಒಂದು ಕೋಟಿ ರೂ. ಅನುದಾನ ಕೂಡಲೇ ಬಿಡುಗಡೆ ಮಾಡ ಲಾಗುವುದು. ಮುಂದೆ ಕೇಂದ್ರ ಸರಕಾರದ ಸಹಯೋಗದೊಂದಿಗೆ ಮರೀನಾ ಸ್ಥಾಪಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು. ಇದರಿಂದ ಈ ಭಾಗ ದಲ್ಲಿ ವಾಣಿಜ್ಯ ಚಟುವಟಿಕೆ ಗಳನ್ನು ದೊಡ್ಡ ಮಟ್ಟದಲ್ಲಿ ಬೆಳೆದು, ಕರ್ನಾಟಕಕ್ಕೆ ಪ್ರವಾಸೋದ್ಯಮದಿಂದ ಕನಿಷ್ಠ 2ರಿಂದ 4ಸಾವಿರ ಕೋಟಿ ರೂ. ಆದಾಯ ಪಡೆಯಬಹುದಾ ಗಿದೆ ಎಂದು ಸಚಿ ಬಸವರಾಜ ಬೊಮ್ಮಾಯಿ ಹೇಳಿದರು.

ಅದೇ ರೀತಿ ಪಡುಕೆರೆ ಬೀಚ್‌ನಲ್ಲಿ ರೋಪ್ ಮೂಲಕ ಕೇಬಲ್ ಕಾರು ಆರಂಭಿಸುವ ಸಾಧ್ಯತೆ ಬಗ್ಗೆ ತಾಂತ್ರಿಕವಾಗಿ ಅಧ್ಯಯನ ಮಾಡಿ ಮುಂದಿನ ದಿನಗಳಲ್ಲಿ ಅನುಷ್ಠಾನಕ್ಕೆ ತರುವ ಪ್ರಯತ್ನ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News