×
Ad

ಕಾರು ಢಿಕ್ಕಿ : ಬಾಲಕನಿಗೆ ಗಂಭೀರ ಗಾಯ

Update: 2020-12-04 17:35 IST

ಉಳ್ಳಾಲ : ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕುಂಪಲ ಬೈಪಾಸ್ ನಲ್ಲಿ ನಡೆದಿದೆ.

ಐಯಾನ್ (16) ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಬಾಲಕ. ಪಿಯುಸಿ ವಿದ್ಯಾರ್ಥಿಯಾಗಿರುವ ಈತ ಬೈಪಾಸ್ ಹೆದ್ದಾರಿ ಬಳಿ ಇರುವ ತನ್ನ ಮನೆ ಮುಂಭಾಗದಿಂದ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಢಿಕ್ಕಿಯಾಗಿ ನಂತರ ರಸ್ತೆ ಬದಿಯ ಟೆಲಿಫೋನ್ ಕಂಬಕ್ಕೆ ಗುದ್ದಿದೆ.

ಗಂಭೀರ ಗಾಯಗೊಂಡ ಬಾಲಕನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News