ಹಲ್ಲೆ ಪ್ರಕರಣದ ಆರೋಪಿ 15 ವರ್ಷಗಳ ಬಳಿಕ ಸೆರೆ

Update: 2020-12-04 12:28 GMT
ಪ್ರವೀಣ್

ಮಂಗಳೂರು, ಡಿ.4: ಖಾಸಗಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿ, 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಶುಕ್ರವಾರ ನಗರ ವಿಶೇಷ ದಳದ ಪೊಲೀಸರು ಬಂಧಿಸಿದ್ದಾರೆ.

ಕಾಸರಗೋಡು ಮಧೂರು ರಸ್ತೆಯ ಮೀಪುಗುರಿ ನಿವಾಸಿ ಪ್ರವೀಣ್ (40) ಬಂಧಿತ ಆರೋಪಿ.

ಈತ 2005ರಲ್ಲಿ ಇತರ ನಾಲ್ವರೊಂದಿಗೆ ಸೇರಿಕೊಂಡು ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ್ದ ಎಂದು ದೂರಲಾಗಿತ್ತು. ಈ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈತನ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News