ಉಡುಪಿ ಸಾರಿಗೆ ಕಚೇರಿಯಲ್ಲಿ ಸಕಾಲ ಸಪ್ತಾಹ

Update: 2020-12-04 13:52 GMT

ಉಡುಪಿ, ಡಿ.4: ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಅಧೀಕ್ಷಕರು, ಕಾರ್ಯನಿರ್ವಾಹಕರುಗಳೊಂದಿಗೆ ಸಾರಿಗೆ ಸಕಾಲ ಸಪ್ತಾಹವನ್ನು ಆಚರಿಸಲಾಯಿತು.

ಸಾರಿಗೆ ಇಲಾಖೆಯ ಸೇವೆಗಳಾದ ಕಲಿಕಾ ಲೈಸೆನ್ಸ್, ಚಾಲನಾ ಲೈಸೆನ್ಸ್, ವಾಹನಗಳ ನೋಂದಣಿ, ದ್ವಿಪ್ರತಿ ಲೈಸೆನ್ಸ್, ನೋಂದಣಿ ಪ್ರಮಾಣ ಪತ್ರದ ದ್ವಿಪ್ರತಿ, ಕಲಿಕಾ ಲೈಸೆನ್ಸ್‌ನಲ್ಲಿ ವಿಳಾಸ ಬದಲಾವಣೆ, ಚಾಲನಾ ತರಬೇತಿ ಶಾಲೆಯ ಪರವಾನಿಗೆ ನವೀಕರಣ ಸೇರಿ ಒಟ್ಟು 26 ಸೇವೆ ಗಳು ಸಕಾಲದಡಿ ಬರಲಿದ್ದು, ಸಾರ್ವಜನಿಕರು ಅರ್ಜಿಗಳನ್ನು ಸಕಾಲದ ಅಡಿಯಲ್ಲಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಸಕಾಲದಡಿಯಲ್ಲಿ ಸ್ವೀಕೃತವಾದ ಅರ್ಜಿಗಳಿಗೆ 15 ಅಂಕಿಯ ಜಿಎಸ್‌ಇ ಸಂಖ್ಯೆಯನ್ನು ತಪ್ಪದೆ ನೀಡಬೇಕು. ಇದರ ಜೊತೆಗೆ ಅರ್ಜಿಯ ಪ್ರತಿಯೊಂದು ಹಂತದಲ್ಲಿಯೂ ಅರ್ಜಿದಾರರ ಮೊಬೈಲ್ ಸಂಖ್ಯೆಗೆ ಸಂದೇಶ ರವಾನೆಯಾಗುತ್ತದೆ.

ನಿಗದಿತ ಕಾಲಮಿತಿಯೊಳಗೆ ಅರ್ಜಿಗಳನ್ನು ಕಾನೂನಿನ ಪರಿಮಿತಿಯಲ್ಲಿ ಇತ್ಯರ್ಥಗೊಳಿಸಲಾಗುತ್ತದೆ. ಸಾರ್ವಜನಿಕರು ಸಕಾಲ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲೆಯ ಪ್ರಭಾರ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News