ಡಿಜೆ-ಕೆಜಿ ಹಳ್ಳಿ ಗಲಭೆ ಪ್ರಕರಣ: ಝಾಕೀರ್ 5 ದಿನ ಸಿಸಿಬಿ ಕಸ್ಟಡಿಗೆ

Update: 2020-12-04 15:55 GMT

ಬೆಂಗಳೂರು, ಡಿ.4: ಡಿಜೆ-ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದ ಬಿಬಿಎಂಪಿ ಮಾಜಿ ಸದಸ್ಯ ಎ.ಆರ್.ಝಾಕೀರ್ ನನ್ನು ಸಿಸಿಬಿ ಅಧಿಕಾರಿಗಳು 5 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ.

ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆ ಸಿಸಿಬಿ ತನಿಖಾಧಿಕಾರಿಗಳು ಝಾಕೀರ್ ನನ್ನು ಕಸ್ಟಡಿಗೆ ತೆಗೆದುಕೊಂಡಿದ್ದು, ತೀವ್ರ ವಿಚಾರಣೆಗೊಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗಲಭೆ ಸಂಬಂಧ ಬಿಬಿಎಂಪಿ ಮಾಜಿ ಮೇಯರ್ ಸಂಪತ್‍ ರಾಜ್ ಹಾಗೂ ಝಾಕೀರ್ ಗೆ ಈ ಹಿಂದೆ ಸಿಸಿಬಿ ನೋಟಿಸ್ ನೀಡಿತ್ತು. ವಿಚಾರಣೆಗೆ ಹಾಜರಾದ ವೇಳೆ ಇಬ್ಬರ ಮೊಬೈಲ್‍ಗಳನ್ನು ವಶಕ್ಕೆ ಪಡೆದುಕೊಂಡು, ರಿಟ್ರೈವ್‍ಗಾಗಿ ಎಫ್‍ಎಸ್‍ಎಲ್‍ಗೆ ರವಾನಿಸಿದ್ದರು. ಈ ವರದಿ ಬರುತ್ತಿದ್ದಂತೆ ಆರೋಪಿಗಳಿಬ್ಬರು ತಲೆಮರೆಸಿಕೊಂಡಿದ್ದರು. ಇದಾದ ನಂತರ, ವಿಶೇಷ ತಂಡ ರಚನೆ ಮಾಡಿ, ಇಬ್ಬರನ್ನು ಬಂಧನ ಮಾಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News