ಪ್ರಚೋದನಕಾರಿ ಬರಹ : ಮತ್ತೆ ಇಬ್ಬರ ವಿಚಾರಣೆ

Update: 2020-12-04 16:11 GMT
ಫೈಲ್ ಫೋಟೊ

ಮಂಗಳೂರು, ಡಿ. 4: ನಗರದಲ್ಲಿ ಕಂಡು ಬಂದ ಪ್ರಚೋದನಕಾರಿ ಬರಹ ಹಿನ್ನೆಲೆಯಲ್ಲಿ ನಗರ ಪೊಲೀಸರು ಮತ್ತೆ ಇಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಂತಾಗಿದೆ.

ಬಿಜೈ ಮತ್ತು ಜಿಲ್ಲಾ ಕೋರ್ಟ್ ಸಮೀಪ ಪ್ರಚೋದನಕಾರಿ ಗೋಡೆ ಬರಹ ಬರೆಯಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯ ಅಧಿಕಾರಿಗಳು ಕೇಂದ್ರ ಉಪವಿಭಾಗ ಎಸಿಪಿ ಜಗದೀಶ್ ನೇತೃತ್ವದ ತಂಡ, ಕದ್ರಿ ಪೊಲೀಸ್ ಇನ್‌ಸ್ಪೆಕ್ಟರ್ ಸವಿತ್ರತೇಜ, ಸಿಸಿಬಿ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್, ಬಂದರು ಇನ್‌ಸ್ಪೆಕ್ಟರ್ ಗೋವಿಂದರಾಜ್ ನೇತೃತ್ವದ ತಂಡವನ್ನು ತನಿಖೆಗೆ ನಿಯೋಜಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News