ಕೂಳೂರು ಸೇತುವೆಯಲ್ಲಿ ಬಸ್ ಢಿಕ್ಕಿ : ಗಾಯಳು ಬೈಕ್ ಸವಾರ ಮೃತ್ಯು

Update: 2020-12-04 16:13 GMT

ಮಂಗಳೂರು, ಡಿ. 4: ನಗರದ ಕೂಳೂರು ಸೇತುವೆ ಮೇಲೆ ಚಲಿಸುತ್ತಿದ್ದ ಬೈಕ್‌ಗೆ ಬಸ್ ಢಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಪಂಜಿಮೊಗರು ನಿವಾಸಿ ಅಹ್ಮದ್ ಕಬೀರ್ (22) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ.

ಅಹ್ಮದ್ ಕಬೀರ್ ಕೂಳೂರು ಸೇತುವೆಯ ಮೇಲೆ ಕೂಳೂರು ಕಡೆಯಿಂದ ಕೆಐಒಸಿಎಲ್ ಕಡೆಗೆ ಬೈಕ್‌ನಲ್ಲಿ ಹೋಗುತ್ತಿರುವಾಗ ಮಂಗಳೂರು ಕಡೆಯಿಂದ ಸುರತ್ಕಲ್ ಕಡೆಗೆ ತೆರಳುತ್ತಿದ್ದ ಬಸ್ ಹಿಂದಿನಿಂದ ಢಿಕ್ಕಿಯಾಗಿದೆ. ಪರಿಣಾಮ ಅಹ್ಮದ್ ಕಬೀರ್ ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಕಬೀರ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News