ಮುಲ್ಕಿ ನಪಂ ಮುಖ್ಯಾಧಿಕಾರಿಗೆ ಶ್ರೀ ಚಂದ್ರಶೇಖರ ಸ್ವಾಮೀಜಿಯಿಂದ ಸನ್ಮಾನ

Update: 2020-12-05 05:34 GMT

ಮುಲ್ಕಿ, ಡಿ.5: ಕೊರೋನ ದಿನಗಳಲ್ಲಿ ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿ ಸಹಿತ ಮುಲ್ಕಿ ಹೋಬಳಿಯಲ್ಲಿ ಕೊರೋನ ನಿಯಂತ್ರಣಕ್ಕೆ ಉತ್ತಮವಾಗಿ ಕಾರ್ಯನಿರ್ವಹಿಸಿದ ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರ ಪೂಜಾರಿಯವರನ್ನು ಬೆಂಗಳೂರಿನ ಅಂತಾರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿ ಸನ್ಮಾನಿಸಿ ಗೌರವಿಸಿದರು.

ಮುಲ್ಕಿ ಕಿಲ್ಪಾಡಿಯಲ್ಲಿರುವ ಆಶ್ರಮದಲ್ಲಿ ಸನ್ಮಾನಿಸಿ ಮಾತನಾಡಿದ ಸ್ವಾಮೀಜಿ, ಕೊರೋನ ಯೋಧರಾಗಿ ಚಂದ್ರ ಪೂಜಾರಿಯವರ ಕರ್ತವ್ಯ ನಿರ್ವಹಣೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತೃಶ್ರೀ ಶಾರದಮ್ಮ, ಆಶ್ರಮದ ನಿರ್ದೇಶಕಿ ರಜನಿ ಚಂದ್ರಶೇಖರ್ ಭಟ್, ರಾಹುಲ್ ಸಿ. ಭಟ್, ರೋಶನಿ ಭಟ್, ಮತ್ತಿತರರು ಉಪಸ್ಥಿತರಿದ್ದರು. ಆಶ್ರಮದ ಸಂಚಾಲಕ ಪುನೀತ್ ಕೃಷ್ಣ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News