ಕರ್ನಾಟಕ ಬಂದ್ ಗೆ ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ

Update: 2020-12-05 06:05 GMT

ಶಿವಮೊಗ್ಗ, ಡಿ.5: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳ‌ ಒಕ್ಕೂಟ  ಕರೆ‌ ನೀಡಿದ್ದ ಕರ್ನಾಟಕ ಬಂದ್ ಗೆ ಮುಖ್ಯಮಂತ್ರಿಯ ತವರು ಜಿಲ್ಲೆ ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜಿಲ್ಲೆಯಲ್ಲಿ ಬಂದ್ ಗೆ ಯಾವುದೇ ಸಂಘಟನೆಗಳು ಬಂದ್​ಗೆ ಕರೆ ನೀಡಿಲ್ಲ. ಇದರಿಂದ ಜಿಲ್ಲೆಯಲ್ಲಿ ಸರಕಾರಿ, ಖಾಸಗಿ ಹಾಗೂ ಇತರ ವಾಹನ ಸಂಚಾರ ಎಂದಿನಂತೆ ಓಡಾಡುತ್ತಿವೆ. ಬಸ್ ನಿಲ್ದಾಣ, ಬಿ.ಎಚ್. ರಸ್ತೆ  ಸೇರಿದಂತೆ ನಗರದಾದ್ಯಂತ ಆಟೋಗಳು ಸಂಚರಿಸುತ್ತಿವೆ. ನಗರ ಸೇರಿದಂತೆ ಇತರೆ ತಾಲೂಕುಗಳಲ್ಲೂ ವಾಹನ ಸಂಚಾರ ನಡೆಯುತ್ತಿದ್ದು ಯಾವುದೇ ವ್ಯತ್ಯಯ ಕಂಡು ಬಂದಿಲ್ಲ.

ಆದರೆ ಅಂಗಡಿ ಮುಂಗ್ಗಟ್ಟುಗಳು ಇನ್ನೂ ತೆರೆದಿಲ್ಲ. ಅದಕ್ಕೆ ಕಾರಣ ಮೊನ್ನೆ ಶಿವಮೊಗ್ಗದ ಹಳೆ ಭಾಗದಲ್ಲಿ ನಡೆದ ಅಹಿತಕರ ಘಟನೆ. ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ 10 ಗಂಟೆ ತನಕ ಕರ್ಪ್ಯೂ ಹಾಗೂ ಇತರ ಭಾಗದಲ್ಲಿ 144 ಸೆಕ್ಷನ್ ಜಾರಿಯಲ್ಲಿತ್ತು.

ಬಿಗಿಬಂದೋಬಸ್ತ್: ಗಲಭೆ‌, ನಿಷೇಧಾಜ್ಙೆ ಹಿನ್ನಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ.ಯಾವುದೇ ಅಹಿತಕರ ಘಟನೆ ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News