ವಿಶೇಷ ಶಾಲಾ ಶಿಕ್ಷಕರಿರ ಗೌರವಧನ ದ್ವಿಗುಣಕ್ಕೆ ಮನವಿ
Update: 2020-12-05 12:25 GMT
ಉಡುಪಿ, ಡಿ.5: ಉಡುಪಿಗೆ ಇತ್ತೀಚೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳ ಆಪ್ತ ಸಹಾಯಕ ಪಿ.ಕೆ.ಪುರುಷೋತ್ತಮ್ ಅವರನ್ನು ಭೇಟಿಯಾದ ವಿಶೇಷ ಶಾಲಾ ಶಿಕ್ಷಕರ ನಿಯೋಗವು, ಗೌರವ ವೇತನವನ್ನು ದ್ವಿಗುಣಗೊಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ, ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖಾ ಸಚಿವರಿಗೆ ಹಾಗೂ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಅದೇ ರೀತಿ ಮುಜರಾಯಿ, ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರಿಗೂ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಶೇಷ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷೆ ಡಾ.ಕಾಂತಿ ಹರೀಶ್, ಪ್ರಧಾನ ಕಾರ್ಯದರ್ಶಿ ಡಾ.ವಸಂತ್ ಕುಮಾರ್ ಶೆಟ್ಟಿ, ಗೌರವಾಧ್ಯಕ್ಷೆ ಆಗ್ನೇಸ್ ಕುಂದರ್, ಪದಾಧಿಕಾರಿಗಳಾದ ಪ್ರಭಾಕರ್ ಅಮ್ಮನ್ನ, ಹರೀಶ್ ಮೊದಲಾದವರು ಉಪಸ್ಥಿತರಿದ್ದರು.