‘ಜನ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಲು ಆದ್ಯತೆ ನೀಡಿ’

Update: 2020-12-05 14:18 GMT

ಉಡುಪಿ, ಡಿ.5: ಕೋವಿಡ್‌ನಿಂದಾಗಿ ಪ್ರಸ್ತುತ ಸಾಲಿನ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಅನುಷ್ಠಾನ ನಿಗದಿತ ಗುರಿ ಸಾಧಿಸಿಲ್ಲ. ಡಿಸೆಂಬರ್ ಹಾಗೂ ಜನವರಿ ತಿಂಗಳಲ್ಲಿ ಇವುಗಳ ಪೂರ್ಣ ಪ್ರಮಾಣದ ಅನುಷ್ಠಾನಕ್ಕೆ ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ ರೇಜು ತಿಳಿಸಿದ್ದಾರೆ.

ಮಣಿಪಾಲದಲ್ಲಿರುವ ಜಿಪಂನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಸರಕಾರ ಪ್ರಸ್ತುತ ಬಜೆಟ್‌ನಲ್ಲಿ ಜನಸಾಮಾನ್ಯ ಕಲ್ಯಾಣ ಯೋಜನೆ ಸೇರಿದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನೇಕ ಯೋಜನೆ ಗಳು, ಕಾರ್ಯಕ್ರಮ ಗಳನ್ನು ರೂಪಿಸಿದೆ. ಇವುಗಳ ಅನುಷ್ಟಾನ ಕೋವಿಡ್ ಸಾಂಕ್ರಾಮಿಕ ರೋಗದಿಂದ ನಿಗದಿತ ಮಟ್ಟದಲ್ಲಿ ಆಗಿಲ್ಲ. ಡಿಸೆಂಬರ್ ಹಾಗೂ ಜನವರಿಯಲ್ಲಿ ಇವುಗಳನ್ನು ಪೂರ್ಣಗೊಳಿಸಲು ಕಾರ್ಯಪ್ರವೃತರಾಗಬೇಕು ಎಂದರು.

ಸರಕಾರ ಪ್ರಸ್ತುತ ಬಜೆಟ್‌ನಲ್ಲಿ ಜನಸಾಮಾನ್ಯ ಕಲ್ಯಾಣ ಯೋಜನೆ ಸೇರಿದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನೇಕ ಯೋಜನೆ ಗಳು, ಕಾರ್ಯಕ್ರಮ ಗಳನ್ನು ರೂಪಿಸಿದೆ. ಇವುಗಳ ಅನುಷ್ಟಾನ ಕೋವಿಡ್ ಸಾಂಕ್ರಾಮಿಕ ರೋಗದಿಂದ ನಿಗದಿತ ಮಟ್ಟದಲ್ಲಿ ಆಗಿಲ್ಲ. ಡಿಸೆಂಬರ್ ಹಾಗೂ ಜನವರಿಯಲ್ಲಿ ಇವುಗಳನ್ನು ಪೂರ್ಣಗೊಳಿಸಲು ಕಾರ್ಯಪ್ರವೃತರಾಗಬೇಕು ಎಂದರು. ಜಿಲ್ಲೆಯಲ್ಲಿ ಕಳೆದ 4 ತಿಂಗಳಲ್ಲಿ ಅತೀ ಹೆಚ್ಚಿನ ಮಳೆಯಿಂದಾಗಿ ಉಂಟಾದ ನೆರೆಯಿಂದಾದ ನಷ್ಟದ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಅವರು, ಮಳೆಯಿಂದ ಹಾನಿಯುಂಟಾದ ಮನೆಗಳ ನಿರ್ಮಾಣ ಕಾರ್ಯಗಳನ್ನು ಪೂರ್ಣ ಗೊಳಿಸಲು ಜನಸಾಮಾನ್ಯರಿಗೆ ಅಗತ್ಯ ನೆರವನ್ನು ಕಲ್ಪಿಸಬೇಕು ಎಂದರು.

ಜಿಲ್ಲೆಯಲ್ಲಿ ಕಳೆದ 4 ತಿಂಗಳಲ್ಲಿ ಅತೀ ಹೆಚ್ಚಿನ ಮಳೆಯಿಂದಾಗಿ ಉಂಟಾದ ನೆರೆಯಿಂದಾದ ನಷ್ಟದ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಅವರು, ಮಳೆಯಿಂದ ಹಾನಿಯುಂಟಾದ ಮನೆಗಳ ನಿರ್ಮಾಣ ಕಾರ್ಯಗಳನ್ನು ಪೂರ್ಣ ಗೊಳಿಸಲು ಜನಸಾಮಾನ್ಯರಿಗೆ ಅಗತ್ಯ ನೆರವನ್ನು ಕಲ್ಪಿಸಬೇಕು ಎಂದರು.

ಕುಡಿಯುವ ನೀರು: ನಗರ ಪ್ರದೇಶ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಕುಡಿಯುವ ನೀರಿನ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯ ತೆಯ ಮೇರೆಗೆ ಕೈಗೊಂಡು, ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದರೊಂದಿಗೆ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಬಡ ಜನರಿಗೆ ಉದ್ಯೋಗ ನೀಡುವ ಜೊತೆಗೆ ಶಾಶ್ವತ ಅಭಿವೃದ್ಧಿಗಾಗಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಕೂಲಿ ಕಾರ್ಮಿಕರಿಗೆ ನಿಗದಿತ ಅವಧಿಯಲ್ಲಿ ಕೂಲಿ ಹಣವನ್ನು ನೀಡಬೇಕು ಎಂದರು.

ಮಹಿಳೆಯರು ಸ್ವ-ಉದ್ಯೋಗ ಕೈಗೊಂಡು ಸ್ವಾವಲಂಬಿಗಳಾಗಲು ಸ್ವ- ಉದ್ಯೋಗ ಯೋಜನೆ ಜಾರಿಗೆ ತರಲಾಗಿದ್ದು, ಇದನ್ನು ಅರ್ಹ ಫಲಾನು ಭವಿ ಗಳಿಗೆ ತಲುಪಿಸುವುದರೊಂದಿಗೆ ಅವರು ಆರ್ಥಿಕರಾಗಿ ಸಬಲರಾಗಬೇಕು. ಇಂತವರ ಯಶೋಗಾಥೆಗಳನ್ನು ಪ್ರಚಾರ ಪಡಿಸಬೇಕು. ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಜಾರಿ ಸೇರಿದಂತೆ ಅಂಗನವಾಡಿ ಮಕ್ಕಳಿಗೆ ಹಾಲು ಪೌಡರ್ ವಿತರಣೆಯನ್ನು ಸಮರ್ಪ ಕವಾಗಿ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಮೀನುಗಾರಿಕಾ ಚಟುವಟಿಕೆಗಳನ್ನು ಅವೈಜ್ಞಾನಿಕವಾಗಿ, ನಿಯಮ ಗಳನ್ನು ಪಾಲಿಸದೇ ಅಕ್ರಮವಾಗಿ ಮಾಡುತ್ತಿರುವ ಬಗ್ಗೆ ದೂರು ಗಳು ಕೇಳಿ ಬರುತ್ತಿವೆ. ಇವುಗಳ ಬಗ್ಗೆ ಎಚ್ಚರಿಕೆ ಕ್ರಮ ವಹಿಸಬೇಕೆಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

38 ಕೋಟಿ ರೂ.ಬಿಡುಗಡೆ: ಕಳೆದ ಎರಡು ವರ್ಷದ ಸಾಲಿನಲ್ಲಿ ಮೀನುಗಾರರ ಮಹಿಳೆಯರಿಗೆ ನೀಡಿದ ಅಲ್ಪಾವಧಿ ಸಾಲವನ್ನು ಮನ್ನಾ ಮಾಡಲು 38 ಕೋಟಿ ರೂ.ಬಿಡುಗಡೆಯಾಗಿದ್ದು, ಅದರಲ್ಲಿ 31 ಕೋಟಿ ಮಾತ್ರ 11,000 ಜನರ ಖಾತೆಗೆ ಜಮಾ ಆಗಿದೆ. ಬಾಕಿ ಉಳಿದ 4,050 ಜನರ ಖಾತೆಗೆ ಆಧಾರ್ ಲಿಂಕ್ ಆಗದ ಕಾರಣ ಜಮೆಯಾಗಿಲ್ಲ. ಈ ಬಗ್ಗೆ ಕ್ರಮ ವಹಿಸಬೇಕು ಎಂದರು.

ಜಿಲ್ಲೆಯಿಂದ ಬರುವ ಮಾಹಿತಿಗಳ ಆಧಾರದ ಮೇಲೆ ರಾಜ್ಯ ಮಟ್ಟದಲ್ಲಿ ಮುಂಬರುವ ಬಜೆಟ್‌ನಲ್ಲಿ ಯೋಜನೆಗಳನ್ನು ತಯಾರಿಸಲಾಗುವುದು. ಇದರ ಹಿನ್ನೆಲೆಯಲ್ಲಿ ಪ್ರತಿಯೊಂದು ಇಲಾಖೆಯವರು ತಮ್ಮ ಇಲಾಖೆಗಳಲ್ಲಿನ ಯೋಜನೆಗಳ ಮಾಹಿತಿಯನ್ನು ನಿಗದಿತ ಸಮಯದಲ್ಲಿ ರಾಜ್ಯ ಮಟ್ಟದ ಕಚೇರಿಗಳಿಗೆ ತಲುಪಿಸಬೇಕು ಎಂದು ಅವರು ಸೂಚನೆ ನೀಡಿದರು.

ವಿಧಾನಸಭಾ ಅಧಿವೇಶನದಲ್ಲಿ ಇಲಾಖೆಗೆ ಸಂಬಂಧಿಸಿದ ಪ್ರಶ್ನೆಗಳ ಬಗ್ಗೆ ಉತ್ತರವನ್ನು ವಿಳಂಬವಿಲ್ಲದೇ ನಿಖರ ಮಾಹಿತಿಗಳನ್ನು ಕಳುಹಿಸಬೇಕು ಎಂದು ಅವರು ಸೂಚನೆ ನೀಡಿದರು.

ಗಣಿಗಾರಿಕೆಗೆ ಅವಕಾಶ:  ಸಿಆರ್‌ಝೆಡ್ ಹಾಗೂ ನಾನ್ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಮರಳು ಗಣಿಗಾರಿಕೆಯನ್ನು ಕೈಗೊಳ್ಳುತ್ತಿರುವುದು ಸೇರಿ ದಂತೆ ಇತರ ಗಣಿಗಾರಿಕೆಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಅವರು, ಸರಕಾರದ ನಿಯಮಾನುಸಾರ ಸಾಂಪ್ರದಾಯಿಕ ರೀತಿಯಲ್ಲಿ ಎಲ್ಲಾ ರೀತಿಯ ಗಣಿಗಾರಿಕೆಗೆ ಅವಕಾಶ ಮಾಡಿಕೊಡಬೇಕೆಂದು ತಿಳಿಸಿದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕ ಅವಕಾಶಗಳಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯ ಮೂಲಭೂತ ಅಭಿವೃದ್ಧಿ ಕಾಮಗಾರಿಗಳನ್ನು ಕಲ್ಪಿಸಬೇಕೆಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News