ಸಂಪುಟ ವಿಸ್ತರಣೆ: ಯಡಿಯೂರಪ್ಪ ತೀರ್ಮಾನ ಮಾಡಲಿದ್ದಾರೆ ಎಂದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

Update: 2020-12-06 16:50 GMT

ಬೆಂಗಳೂರು, ಡಿ. 6: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ ತೀರ್ಮಾನ ಮಾಡಲಿದ್ದಾರೆ ಎಂದು ರಾಜ್ಯ ಬಿಜೆಪಿಯ ನೂತನ ಉಸ್ತುವಾರಿ ಅರುಣ್ ಸಿಂಗ್ ಅವರು ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ರವಿವಾರ ಇಲ್ಲಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪನವರೆ ತೀರ್ಮಾನ ಮಾಡಲಿದ್ದಾರೆ. ಸಂಪುಟ ವಿಸ್ತರಣೆ ಅವರ ಪರಮಾಧಿಕಾರ. ಸೂಕ್ತ ಸಮಯದಲ್ಲಿ, ಸರಿಯಾದ ತೀರ್ಮಾನ ಮಾಡಲಿದ್ದಾರೆ ಎಂದರು.

ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ತಮಗಿರುವ ವಿವೇಚನೆಯನ್ನು ಬಳಸಿ ತೀರ್ಮಾನ ಮಾಡುತ್ತಾರೆ. ಆದರೆ, ಮಾಧ್ಯಮ ಪ್ರತಿನಿಧಿಗಳು ಸಂಪುಟ ವಿಸ್ತರಣೆಗೆ ಬಹಳ ಆತುರದಲ್ಲಿದ್ದಂತೆ ಕಾಣುತ್ತಿದೆ ಎಂದು ಅರುಣ್ ಸಿಂಗ್ ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News