ಭದ್ರತಾ ಪಡೆಯ ಮೇಲೆ ಉಗ್ರರ ದಾಳಿ: ಪೊಲೀಸ್ ಸಹಿತ ಇಬ್ಬರಿಗೆ ಗಾಯ

Update: 2020-12-06 14:16 GMT
ಸಾಂದರ್ಭಿಕ ಚಿತ್ರ

ಶ್ರೀನಗರ, ಡಿ.6: ಶ್ರೀನಗರದಲ್ಲಿ ಗಸ್ತು ತಿರುಗುತ್ತಿದ್ದ ಭದ್ರತಾ ಪಡೆಯ ಮೇಲೆ ರವಿವಾರ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಹಾಗೂ ನಾಗರಿಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಹವಲ್ ಪ್ರದೇಶದ ಸಜ್‌ಗರಿಪೋರ ಎಂಬಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ಹಾಗೂ ಸಿಆರ್‌ಪಿಎಫ್ ಜಂಟಿ ತಂಡದ ಮೇಲೆ ಉಗ್ರರು ಹಠಾತ್ ಗುಂಡಿನ ದಾಳಿ ನಡೆಸಿದಾಗ ಪೊಲೀಸ್ ಸಿಬ್ಬಂದಿ ಫಾರೂಕ್ ಅಹ್ಮದ್ ಹಾಗೂ ಸ್ಥಳೀಯ ನಿವಾಸಿ ಮುನೀರ್ ಅಹ್ಮದ್ ಎಂಬವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪೊಲೀಸರು ಪ್ರದೇಶವನ್ನು ಸುತ್ತುವರಿದಿದ್ದು ಉಗ್ರರ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News