ಹಳೆಯಂಗಡಿ : ಟೆಂಪೋ ಢಿಕ್ಕಿ; ಪಾದಚಾರಿ ತಾಯಿ ಮೃತ್ಯು, ಮಗುವಿಗೆ ಗಂಭೀರ ಗಾಯ

Update: 2020-12-06 15:08 GMT

ಮುಲ್ಕಿ :  ಹಳೆಯಂಗಡಿ ಕೆನರಾ ಬ್ಯಾಂಕ್ ಬಳಿ ಟೆಂಪೋ ಢಿಕ್ಕಿ ಹೊಡೆದು ನಡೆದ ಅಪಘಾತದಲ್ಲಿ ತಾಯಿ ಮೃತಪಟ್ಟರೆ ಮಗ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರವಿವಾರ ನಡೆದಿದೆ.

ಹಳೆಯಂಗಡಿ ಬಸ್ಸು ನಿಲ್ದಾಣದ ಬಳಿಯ ನಿವಾಸಿ ಸುಖಲತ (44) ಅವರ ಮಗ ಚಿರಾಗ್(10) ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರು ವಾಗ  ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ತಾಯಿ ಮತ್ತು ಮಗನಿಗೆ ಢಿಕ್ಕಿ ಹೊಡೆದು ಬಳಿಕ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿದೆ.

ಗಂಭೀರ ಗಾಯಗೊಂಡ ಇಬ್ಬರನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು ಸುಖಲತ (42) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಗ ಚಿರಾಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ಸುಖಲತಾ ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದು ಹಳೆಯಂಗಡಿಯಲ್ಲಿ ನೆಲೆಸಿದ್ದಾರೆ. ಮಗ ಚಿರಾಗ್ ಮುಲ್ಕಿ ಮಹರ್ಷಿ ಶಾಲೆಯ ವಿದ್ಯಾರ್ಥಿ.

ಸುರತ್ಕಲ್ ಟ್ರಾಫಿಕ್ ಪೊಲೀಸರು ಟೆಂಪೋ ಚಾಲಕನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News