×
Ad

ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ: 60:40 ಅನುಪಾತಕ್ಕೆ ರಾಜ್ಯ ಸಚಿವ ಸಂಪುಟದ ಒಪ್ಪಿಗೆ

Update: 2020-12-07 22:11 IST

ಬೆಂಗಳೂರು: ಕರ್ನಾಟಕ ರಾಜ್ಯದ ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ.

ರಾಜ್ಯದ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಅವರ ಸತತ ಪ್ರಯತ್ನದ ಫಲವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರು ಸಮ್ಮತಿಸಿದ್ದಾರೆ.

ಕೋವಿಡ್ ಲಾಕ್ ಡೌನ್ ಮಧ್ಯೆಯೂ 11 ಬಾರಿ ನವದೆಹಲಿಗೆ ತೆರಳಿ ಕೇಂದ್ರದ ಜಲಶಕ್ತಿ ಸಚಿವರನ್ನು ತರ್ಕಬದ್ಧವಾಗಿ ಒತ್ತಾಯಿಸಿದ್ದ ಸಚಿವ ರಮೇಶ್ ಜಾರಕಿಹೊಳಿ‌ ಅವರ ಪೂರಕ ದಾಖಲೆಗಳನ್ನು ಪರಿಶೀಲಿಸಿದ ಕೇಂದ್ರ ಸರ್ಕಾರವು ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ, ಒಟ್ಟು ಅನುದಾನದ ಶೇ.60ರಷ್ಟು ಹಣಕಾಸಿನ ನೆರವು ನೀಡಲಿದೆ. ಉಳಿದ ಶೇ. 40ರಷ್ಟು ರಾಜ್ಯ ಸರ್ಕಾರದ ಪಾಲಿನ‌ ಅನುದಾನಕ್ಕೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News