ಬೆಂಗಳೂರು ಗಲಭೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಂಪತ್‍ರಾಜ್

Update: 2020-12-08 11:51 GMT

ಬೆಂಗಳೂರು, ಡಿ.8: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಮೇಯರ್ ಸಂಪತ್‍ರಾಜ್, ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಳಿಕ ಸಂಪತ್‍ರಾಜ್‍ಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು.

ಸದ್ಯ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ಸಂಪತ್‍ರಾಜ್ ಜಾಮೀನು ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಸಂಪತ್‍ರಾಜ್ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ವಜಾಗೊಳಿಸಿದ್ದರಿಂದ ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್ ನಲ್ಲಿ ಮಾಜಿ ಮೇಯರ್ ಸಂಪತ್ ರಾಜ್‍ಗೆ ಜಾಮೀನು ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News