ಕುಮಾರಸ್ವಾಮಿ ರೈತ ಪರ ಕಾರ್ಯಕ್ರಮ ನೀಡಿದ್ದಾರೆ, ಅವರೊಬ್ಬ ರೈತನ ಮಗ: ಸಂಸದ ಪ್ರತಾಪ್ ಸಿಂಹ

Update: 2020-12-11 16:58 GMT

ಮೈಸೂರು,ಡಿ.11: ಬಿಜೆಪಿ ಒಳ್ಳೆಯ ಕೆಲಸವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬೆಂಬಲಿಸಿದ್ದಾರೆ. ರಾಜಕೀಯ ಕಾರಣಕ್ಕೆ ಅವರನ್ನು ಟೀಕಿಸುವುದು ಸಣ್ಣತನ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದರು.

ವಿಧಾನಪರಿಷತ್ ನಲ್ಲಿ ಬಿಜೆಪಿ ಭೂಸುಧಾರಣಾ ಕಾಯ್ದೆಗೆ (2ನೇ ತಿದ್ದುಪಡಿ) ಜಾತ್ಯಾತೀತ ಜನತಾ ದಳ ಬೆಂಬಲ ಸೂಚಿಸಿದ ವಿಚಾರವಾಗಿ ಶುಕ್ರವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಕುಮಾರಸ್ವಾಮಿ ಅವರು 20-20 ಸರ್ಕಾರದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ರೈತರ ಸಾಲ ಮನ್ನಾದಂತಹ ರೈತ ಪರ ಕಾರ್ಯಕ್ರಮ ನೀಡಿದ್ದಾರೆ. ಅವರೊಬ್ಬ ರೈತನ ಮಗ. ಹೀಗಾಗಿ, ರೈತರು ಹಾಗೂ ಗೋವಿನ ಬಗ್ಗೆ ಅವರಿಗೆ ಗೊತ್ತಿದೆ. ಇದೇ ಕಾರಣಕ್ಕೆ ಅವರು ಬಿಜೆಪಿಯ ಕಾಯ್ದೆಯನ್ನು ಬೆಂಬಲಿಸಿದ್ದಾರೆ. ಅವರನ್ನು ಟೀಕೆ ಮಾಡುವುದು ಸರಿಯಲ್ಲ ಎಂದು ಎಚ್ ಡಿ ಕುಮಾರಸ್ವಾಮಿಯವರ ನಿಲುವನ್ನು ಬೆಂಬಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News