×
Ad

ಮನೆಗೆ ನುಗ್ಗಿದ ಕಾರು: ಓರ್ವ ಮೃತ್ಯು, ನಾಲ್ವರು ಗಂಭೀರ

Update: 2020-12-14 12:58 IST

ವಿಜಯಪುರ, ಡಿ.14: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ್ದರಿಂದ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಇಂದು ಬೆಳಗ್ಗೆ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಬಳಿ ನಡೆದಿದೆ.

ಕಾರು ಚಾಲಕ ಮುದ್ದೇಬಿಹಾಳ ಪಟ್ಟಣ ನಿವಾಸಿ ಮಾರುತಿ ಹೊಸೂರ(30) ಮೃತಪಟ್ಟವರು. ಕಾರಿನಲ್ಲಿದ್ದ ಇತರ ನಾಲ್ವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಅವರನ್ನು ಬಾಗಲಕೋಟ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಅಪಘಾತದ ಸಂದರ್ಭ ಮನೆಯಲ್ಲಿದ್ದ ಐವರು ಅಪಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News