ಜಿಲ್ಲಾ ಪಂಚಾಯತ್ ಸದಸ್ಯನ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ

Update: 2020-12-14 14:48 GMT

ಧಾರವಾಡ, ಡಿ.14: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್‍ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡದ ಸಿಬಿಐ ವಿಶೇಷ ಕೋರ್ಟ್ ವಜಾಗೊಳಿಸಿದೆ. 

ಯೋಗೀಶ್‍ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವಾಗಿತ್ತು. ಈ ಬಳಿಕ ನ್ಯಾಯಾಂಗ ಬಂಧನವಾಗಿ, ಬೆಳಗಾವಿಯ ಹಿಂಡಲಗಾ ಜೈಲು ಸೇರಿದ್ದರು.

ಬಳಿಕ ಜಾಮೀನು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಧಾರವಾಡದ ಸಿಬಿಐ ವಿಶೇಷ ಕೋರ್ಟ್, ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೈಲೇ ಗತಿ ಎನ್ನುವಂತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News