ಪರಿಷತ್ನಲ್ಲಿ ಗದ್ದಲ, ಕೋಲಾಹಲ: ರಾಜ್ಯಪಾಲರ ಮೊರೆಹೋಗಲು ಬಿಜೆಪಿ ಚಿಂತನೆ
Update: 2020-12-15 08:25 GMT
ಬೆಂಗಳೂರು: ವಿಧಾನಪರಿಷತ್ನಲ್ಲಿ ನಡೆದ ಗದ್ದಲ, ಕೋಲಾಹಲಕ್ಕೆ ಸಂಬಂಧಿಸಿದಂತೆ ಬಿಜೆಪಿಯು ರಾಜ್ಯಪಾಲರ ಮೊರೆಹೋಗಲು ಚಿಂತನೆ ನಡೆಸಿದ್ದು, ಈ ಸಂಬಂಧ ಮುಖ್ಯಮಂತ್ರಿ ನೇತೃತ್ವದಲ್ಲಿ ಬಿಜೆಪಿ ಹಿರಿಯ ಸಚಿವರ ಸಭೆ ನಡೆಯುತ್ತಿದೆ.
ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಸಭೆ ನಡೆಯುತ್ತಿದ್ದು, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಮಾಧುಸ್ವಾಮಿ, ಸಚಿವರಾದ ಅಶೋಕ್, ಸೋಮಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಸಭೆಯಲ್ಲಿ ರಾಜ್ಯಪಾಲರಿಗೆ ದೂರು ನೀಡುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಬಳಿಕ ರಾಜಭವನನಕ್ಕೆ ತೆರಳಿ ದೂರು ನೀಡುವ ವಿಚಾರವಾಗಿ ಸಮಾಲೋಚನೆ ನಡೆಯುತ್ತಿದೆ.