×
Ad

ಉತ್ತರಪ್ರದೇಶ: ಅಂಬೇಡ್ಕರ್ ಪ್ರತಿಮೆಗೆ ಹಾನಿ

Update: 2020-12-15 21:27 IST
ಸಾಂದರ್ಭಿಕ ಚಿತ್ರ

ಬಲ್ಲಿಯಾ, ಡಿ. 15: ಇಲ್ಲಿನ ಗ್ರಾಮವೊಂದರಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಹಾನಿ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೀಮ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಲೋಹ್ತಾ ಪಚ್‌ದೌರಾ ಗ್ರಾಮದಲ್ಲಿ ಸ್ಥಾಪಿಸಲಾದ ಅಂಬೇಡ್ಕರ್ ಪ್ರತಿಮೆಗೆ ದುಷ್ಕರ್ಮಿಗಳು ಹಾನಿ ಉಂಟು ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಘಟನೆ ಬಗ್ಗೆ ಗ್ರಾಮಸ್ಥರು ಮಂಗಳವಾರ ಬೆಳಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಬೀಮ್‌ಪುರ ಪೊಲೀಸ್ ಠಾಣೆಯ ಎಸ್‌ಎಚ್‌ಒ ಶಿವ ಮಿಲನ್ ತಿಳಿಸಿದ್ದಾರೆ. ಗ್ರಾಮದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ. ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಸರ್ಕಲ್ ಅಧಿಕಾರಿ ಕೆ.ಪಿ. ಸಿಂಗ್ ಹೇಳಿದ್ದಾರೆ. ‘‘ಪ್ರಸ್ತುತ ಈ ಪ್ರದೇಶದಲ್ಲಿ ಶಾಂತಿ ನೆಲೆಸಿದೆ. ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಂಬೇಡ್ಕರ್ ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗುವುದು’’ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News