ಹೃದಯಾಘಾತದಿಂದ ಬಸ್‍ ಚಾಲಕ ಮೃತ

Update: 2020-12-17 17:39 GMT

ಚಿಕ್ಕಮಗಳೂರು, ಡಿ.15: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‍ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. 

ಚಾಲಕ ಜಮೀಲ್ (47) ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ಕಡೂರು ತಾಲೂಕು ಸಖರಾಯಪಟ್ಟಣ ನಿವಾಸಿಯಾಗಿದ್ದು, ನಗರದ ಮೂಡಿಗೆರೆ ರಸ್ತೆಯಲ್ಲಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮಂಗಳವಾರ ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ಅವರು 8:30 ವೇಳೆಗೆ ಡಾಕ್‍ ಲಿಸ್ಟ್ ಪಡೆಯುವಾಗ ಕುಸಿದು ಬಿದ್ದಿದ್ದಾರೆ. ಡಿಪೋ ವ್ಯವಸ್ಥಾಪಕರು ಜಮೀಲ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. 2008ರಲ್ಲಿ ಅವರು ಬಸ್ ಚಾಲಕರಾಗಿ ನೇಮಕಗೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News