×
Ad

ರಾಜ್ಯದಲ್ಲಿಂದು ಕೋವಿಡ್ ಗೆ 8 ಮಂದಿ ಬಲಿ: 1,222 ಪ್ರಕರಣಗಳು ದೃಢ

Update: 2020-12-18 21:25 IST

ಬೆಂಗಳೂರು, ಡಿ.18: ರಾಜ್ಯದಲ್ಲಿ ಶುಕ್ರವಾರ 1,222 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 8 ಜನರು ಸೋಂಕಿಗೆ ಬಲಿಯಾಗಿದ್ದು, 1,039 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 9,07,123ಕ್ಕೆ ತಲುಪಿದ್ದು, 223 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.

ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 11,989ಕ್ಕೆ ತಲುಪಿದ್ದು, ಅನ್ಯ ಕಾರಣದಿಂದ 19 ಜನರು ಸಾವನ್ನಪ್ಪಿದ್ದಾರೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 15,380ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

8 ಸೋಂಕಿತರು ಬಲಿ: ಬಳ್ಳಾರಿ 1, ಬೆಂಗಳೂರು ನಗರ 4, ಕೊಡಗು 1, ಕೊಪ್ಪಳ 1, ತುಮಕೂರು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,222 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 1, ಬಳ್ಳಾರಿ 24, ಬೆಳಗಾವಿ 16, ಬೆಂಗಳೂರು ಗ್ರಾಮಾಂತರ 11, ಬೆಂಗಳೂರು ನಗರ 687, ಬೀದರ್ 8, ಚಾಮರಾಜನಗರ 20, ಚಿಕ್ಕಬಳ್ಳಾಪುರ 25, ಚಿಕ್ಕಮಗಳೂರು 14, ಚಿತ್ರದುರ್ಗ 15, ದಕ್ಷಿಣ ಕನ್ನಡ 38, ದಾವಣಗೆರೆ 15, ಧಾರವಾಡ 15, ಹಾಸನ 46, ಹಾವೇರಿ 8, ಕಲಬುರಗಿ 26, ಕೊಡಗು 9, ಕೋಲಾರ 16, ಕೊಪ್ಪಳ 5, ಮಂಡ್ಯ 29, ಮೈಸೂರು 61, ರಾಯಚೂರು 10, ರಾಮನಗರ 7, ಶಿವಮೊಗ್ಗ 16, ತುಮಕೂರು 43, ಉಡುಪಿ 5, ಉತ್ತರ ಕನ್ನಡ 19, ವಿಜಯಪುರ 25, ಯಾದಗಿರಿ ಜಿಲ್ಲೆಯಲ್ಲಿ 6 ಪ್ರಕರಣಗಳು ಪತ್ತೆಯಾಗಿವೆ.

ರಾಜಧಾನಿಯಲ್ಲಿ 687 ಪ್ರಕರಣ ದೃಢ

ರಾಜಧಾನಿಯಲ್ಲಿ ಶುಕ್ರವಾರದಂದು 687 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 443 ಸೋಂಕಿತರು ಬಿಡುಗಡೆಯಾಗಿದ್ದು, 4 ಜನರು ಮೃತರಾಗಿದ್ದಾರೆ.

ನಗರದಲ್ಲಿ ಇಲ್ಲಿಯವರಗೆ ಒಟ್ಟು 3,81,621 ಕೊರೋನ ಸೋಂಕಿತರು ದೃಢಪಟ್ಟಿದ್ದು, 4,256 ಜನರು ಸೋಂಕಿಗೆ ಬಲಿಯಾಗಿದ್ದಾರೆ. 3,66,888 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News