ಬಸ್ ಢಿಕ್ಕಿ: ಪಾದಾಚಾರಿ ಮೃತ್ಯು
Update: 2020-12-19 16:27 GMT
ಕೋಟ, ಡಿ.19: ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.18ರಂದು ರಾತ್ರಿ ವೇಳೆ ತೆಕ್ಕಟ್ಟೆ ಗ್ರಾಮದ ಕೊಮೆ ಕ್ರಾಸ್ ಎಂಬಲ್ಲಿ ನಡೆದಿದೆ.
ಮೃತರನ್ನು ಪ್ರಮೋದ್ ಎಂದು ಗುರುತಿಸಲಾಗಿದೆ. ಇವರು ಕುಂಭಾಶಿಯಲ್ಲಿ ಟೈಲ್ಸ್ ಹಾಕುವ ಕೆಲಸ ಮುಗಿಸಿ, ಊಟಕ್ಕೆ ಹೋಗಲು ರಾ.ಹೆದ್ದಾರಿ ದಾಟಲು ರಸ್ತೆ ಬದಿ ನಿಂತಿದ್ದಾಗ ಉಡುಪಿ ಕಡೆಯಿಂದ ಬಂದ ಬಸ್ ಢಿಕ್ಕಿ ಹೊಡೆಯಿತು. ಇದರಿಂದ ಬಸ್ಸಿನ ಅಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡ ಪ್ರಮೋದ್, ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.